ಕಡಬ ತಾಲೂಕಿಗೆ KSRTC ಸಂಸ್ಥೆಯ ಬಸ್ ಘಟಕವನ್ನು ಪ್ರಾರಂಭಿಸುವ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ರಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಗೆ ಮನವಿ
ಕಡಬ ತಾಲೂಕಿಗೆ KSRTC ಸಂಸ್ಥೆಯ ಬಸ್ ಘಟಕವನ್ನು ಪ್ರಾರಂಭಿಸುವ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ರಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಗೆ ಮನವಿ
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಡಬವನ್ನು ನೂತನ ತಾಲೂಕನ್ನಾಗಿ ಈಗಾಗಲೇ ರಚಿಸಲಾಗಿದ್ದು, ಸದರಿ ತಾಲೂಕಿನ ಹೆಚ್ಚಿನ ನಿವಾಸಿಗಳು ಗ್ರಾಮೀಣ ಪ್ರದೇಶದಲ್ಲಿ ವಾಸ್ತವ್ಯವಿದ್ದು, ಸದರಿ ಸಾರ್ವಜನಿಕರಿಗೆ ದಿನನಿತ್ಯದ ಪ್ರಯಾಣಕ್ಕೆ ಸೂಕ್ತ ಬಸ್ ವ್ಯವಸ್ಥೆಯನ್ನು ಕಲ್ಪಿಸಲು ಮತ್ತು ಸದರಿ ತಾಲೂಕಿನಲ್ಲಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನವಿದ್ದು, ಸದರಿ ದೇವಸ್ಥಾನಕ್ಕೆ ರಾಜ್ಯ ಮತ್ತು ಅಂತರಾಜ್ಯದಿಂದ ಯಾತ್ರಾರ್ಥಿಗಳು ದಿನನಿತ್ಯ ಬರುತ್ತಿದ್ದು, ಸದ್ರಿ ಯಾತ್ರಿಕರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸಲು ಕಡಬದಲ್ಲಿ ಆದಷ್ಟು ಶೀಘ್ರವಾಗಿ ನೂತನವಾಗಿ ಕೆ.ಎಸ್.ಆರ್.ಟಿಸಿ ಬಸ್ ಘಟಕವನ್ನು ಪ್ರಾರಂಭಿಸುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಸಾರಿಗೆ ಮತ್ತು ಮುಜುರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರನ್ನು ಬೆಂಗಳೂರಿನಲ್ಲಿ ಭೇಟಿಮಾಡಿ ಮನವಿ ಸಲ್ಲಿಸಿದರು.