• 18 ಅಕ್ಟೋಬರ್ 2024

ಶ್ಲೋಕ

 ಶ್ಲೋಕ
Digiqole Ad

ಶ್ಲೋಕ – 26

ಅಥ ಚೈ ನಂ ನಿತ್ಯಜಾತಂ ನಿತ್ಯಂ ವಾ ಮನ್ಯಸೇ ಮೃತಮ್ ।

ತಥಾSಪಿ ತ್ವಂ ಮಹಾಬಾಹೋ ನೈನಂ ಶೋಚಿತುಮರ್ಹಸಿ ॥೨೬॥

ಅಥ ಚ ಏನಮ್ ನಿತ್ಯಜಾತಮ್ ನಿತ್ಯಮ್ ವಾ ಮನ್ಯಸೇ ಮೃತಮ್ ತದಾ ಅಪಿ ತ್ವಮ್ ಮಹಾಬಾಹೋ ನ ಏನಮ್ ಶೋಚಿತುಮ್ ಅರ್ಹಸಿ — ಆದರೂ ಈ ಜೀವ ದೇಹದ ಮೂಲಕ ಸದಾ ಹುಟ್ಟುವವನು ಮತ್ತು ಸಾಯುವವನು ಎಂದು ಭಾವಿಸುವೆಯ? ಹಾಗಿದ್ದರೂ, ಓ ಮಹಾವೀರ, ನೀನು ಇವನಿಗಾಗಿ ಕೊರಗುವುದು ತರವಲ್ಲ.

ವೇದಾಂತ ಬಿಟ್ಟು ಲೋಕದ ದೃಷ್ಟಿಯಲ್ಲಿ ವಿಚಾರ ಮಾಡಿದರೆ, ಆತ್ಮ ದೇಹದ ಮೂಲಕ ವ್ಯಕ್ತವಾಗುತ್ತದೆ ಹಾಗು ಸಾವಿನ ಮೂಲಕ ಅವ್ಯಕ್ತವಾಗುತ್ತದೆ. ಹುಟ್ಟು-ಸಾವನ್ನು ಮೀರಿ ನಿಲ್ಲುವುದು ಎಂದೂ ಸಾಧ್ಯವಿಲ್ಲ. ಆದ್ದರಿಂದ ಸಾವಿನ ಬಗ್ಗೆ ದುಃಖ ಪಡುವ ಅಗತ್ಯವಿಲ್ಲ. ಮಹಾ ಬಲಿಷ್ಟನಾದ ನೀನು ಈ ಹಿಂದೆ ಅದೆಷ್ಟು ಯುದ್ಧಗಳನ್ನು ಮಾಡಿದ್ದಿ? ಆಗ ಇರದ ಸಮಸ್ಯೆ ಈಗೇಕೆ? ನೀನು ಮಾಡುತ್ತಿರುವುದು ನಿನ್ನ ಕರ್ತವ್ಯವನ್ನೇ ಹೊರತು ಇನ್ನೇನನ್ನೂ ಅಲ್ಲ-ಎಂದು ಕೃಷ್ಣ ಅರ್ಜುನನಿಗೆ ತಿಳಿಸಿ ಹೇಳುತ್ತಾನೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ