• 27 ಜುಲೈ 2024

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ

 ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ
Digiqole Ad

ಜ.13ರಂದು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಆಡಳಿತ ಮಂಡಳಿಯ ಚುನಾವಣೆ ಜನವರಿ 13ರ ಶನಿವಾರ ನಡೆಯಲಿದ್ದು ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಬೆಳಂದೂರು ಗ್ರಾಮದ ಬೂತ್ ಸಂಖ್ಯೆ 73ರ ಸಭೆ ಕೊಡಿಮಾರು ದೈವಸ್ಥಾನದ ಆವರಣದಲ್ಲಿ ನಡೆಯಿತು. ಬಿಜೆಪಿ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಚುನಾವಣ ಪ್ರಚಾರದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿಗಳಾದ ಉದಯ ರೈ ಮಾದೋಡಿ, ತಾರಾನಾಥ ಕಾಯರ್ಗ, ಚೆನ್ನಪ್ಪ ಗೌಡ ನೂಜಿ, ಅಶ್ವಿನ್ ಎಲ್ ಶೆಟ್ಟಿ, ಚೇತನ್ ಕೋಡಿಬೈಲು, ಶಿವಪ್ರಸಾದ್ ಕಳುವಾಜೆ, ಗಣೇಶ್ ನಿಡ್ವಣ್ಣಾಯ, ಗಂಗಾಧರ ಪೆರಿಯಡ್ಕ, ತಿಮ್ಮಪ್ಪ , ಜ್ಞಾನೇಶ್ವರಿ ಬರೆಪ್ಪಾಡಿ, ಸೀತಾಲಕ್ಷ್ಮಿ , ಸಾಲಗಾರಲ್ಲದ ಕ್ಷೇತ್ರದಲ್ಲಿ ಅವಿರೋಧವಾಗಿ ಆಯ್ಕೆಯಾದ ಪ್ರಕಾಶ್ ರೈ ಸಾರಕರೆ,ಬೆಳಂದೂರು ಬೂತ್ ಸಂಖ್ಯೆ 73ರ ಅಧ್ಯಕ್ಷರಾದ ಚಂಪಾ ಅಬೀರ , ಕಾರ್ಯದರ್ಶಿ ಶೇಖರ ಮೇಗಿನ ಮನೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಮೀಳಾ ಜನಾರ್ದನ,ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಅಬೀರ, ಕಾಣಿಯೂರು ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರಾದ ಚಂದ್ರಯ್ಯ ಆಚಾರ್ಯ, ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಗೌರಿ ಮಾದೋಡಿ, ವಸಂತ ರೈ ಕಾರ್ಕಳ, ಚಂದ್ರಶೇಖರ ಬರೆಪ್ಪಾಡಿ ,ಪ್ರಮೋದ್ ನೀರಜರಿ,ವಸಂತ ಪೂಜಾರಿ ಅಬೀರ,ಶ್ರೀನಿತ್ ಮಿಪಾಲು ಉಪಸ್ಥಿತರಿದ್ದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ