• 18 ಅಕ್ಟೋಬರ್ 2024

ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ವೀಕ್ಷಣೆ,ಭಜನೆ, ಕರಸೇವಕರಿಗೆ ಗೌರವಾರ್ಪಣೆ

 ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ವೀಕ್ಷಣೆ,ಭಜನೆ, ಕರಸೇವಕರಿಗೆ ಗೌರವಾರ್ಪಣೆ
Digiqole Ad

ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜಾನ ಮಂದಿರದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ವೀಕ್ಷಣೆ,ಭಜನೆ, ಕರಸೇವಕರಿಗೆ ಗೌರವಾರ್ಪಣೆ

ಅಯೋಧ್ಯೆಯ ಭವ್ಯ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ನಡೆಯುವ ಸಮಯದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜಾನ ಮಂದಿರದಲ್ಲಿ ಶ್ರೀ ರಾಮೋತ್ಸವ ಕಾರ್ಯಕ್ರಮ ನಡೆಯಿತು.ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜಾನ ಮಂಡಳಿಯವರಿಂದ ಭಜನೆ ಹಾಗೂ ಶ್ರೀ ಲಕ್ಷ್ಮೀ ನರಸಿಂಹ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಕುಣಿತ ಭಜನೆ ನಡೆದು ಬಳಿಕ ದೇವರಿಗೆ ಮಂಗಳಾರತಿ ನಡೆಯಿತು.ಈ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ನಡೆದ ಬಾಲರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಟಿ.ವಿ ಪರದೆಯ ಮೂಲಕ ವೀಕ್ಷಿಸುವ ವ್ಯವಸ್ಥೆ ಮಾಡಲಾಯಿತು.ಈ ಸಂದರ್ಭದಲ್ಲಿ ಅಯೋಧ್ಯೆಗೆ ಕರಸೇವಕರಾಗಿ ತೆರಳಿದ್ದ ಈಶ್ವರ ಗೌಡ ಬೈತ್ತಡ್ಕ ,ವೆಂಕಟ್ರಮಣ ಮಾದೋಡಿ, ಪುರುಷೋತ್ತಮ ಗೌಡ ಅಗಳಿಯವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಭಜಾನ ಮಂಡಳಿಯ ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ,ಅಧ್ಯಕ್ಷರಾದ ‌ವಾಸುದೇವ ನಾಯ್ಕ್ ತೋಟ, ಉಪಾಧ್ಯಕ್ಷರಾದ ಪುಟ್ಟಣ್ಣ ಗೌಡ ಮುಗರಂಜ,ಕೋಶಾಧಿಕಾರಿ ಲಕ್ಷ್ಮಣ ಗೌಡ ಮುಗರಂಜ, ಪದ್ಮಯ್ಯ ಗೌಡ ಅನಿಲ, ಪರಮೇಶ್ವರ ಅನಿಲ, ಧರ್ಮೇಂದ್ರ ಗೌಡ ಕಟ್ಟತ್ತಾರು, ವಿನಯ್ ಎಳುವೆ, ಕೀರ್ತಿ ಕುಮಾರ್, ಪುನೀತ್ ಕಲ್ಪಡ, ರಮೇಶ್ ಅನಿಲ, ಸೇರಿದಂತೆ ಹಲವಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ