• 8 ಸೆಪ್ಟೆಂಬರ್ 2024

ಸುಳ್ಯ; ಚಂದನ ಸಾಹಿತ್ಯ ವೇದಿಕೆಯಿಂದ ಗಣರಾಜ್ಯೋತ್ಸವ; ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ

 ಸುಳ್ಯ; ಚಂದನ ಸಾಹಿತ್ಯ ವೇದಿಕೆಯಿಂದ ಗಣರಾಜ್ಯೋತ್ಸವ; ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ
Digiqole Ad

ಸುಳ್ಯ; ಚಂದನ ಸಾಹಿತ್ಯ ವೇದಿಕೆಯಿಂದ ಗಣರಾಜ್ಯೋತ್ಸವ; ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ

ಸುಳ್ಯ, ಜ, 27: ಸುಳ್ಯ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಸುಳ್ಯದ ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಗಣರಾಜ್ಯೋತ್ಸವ ಪ್ರಯುಕ್ತ ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ ‌ಕಾರ್ಯಕ್ರಮ ಜರುಗಿತು. ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷ, ಸಾಹಿತಿ, ಚಿತ್ರನಿರ್ದೇಶಕ, ಜ್ಯೋತಿಷಿ ಎಚ್. ಭೀಮರಾವ್ ವಾಷ್ಠರ್ ಅಧ್ಯಕ್ಷತೆ ವಹಿಸಿದ್ದರು. ಶಾರದಾ ಕಾಲೇಜಿನ ಮುಖ್ಯಸ್ಥೆ ಶಾರದಾ ಕಾರ್ಯಕ್ರಮ ಉದ್ಘಾಟಿಸಿದರು. ಅಜ್ಜಾವರ ದೇವರಕಳಿಯ ಚೈತನ್ಯ ಸೇವಾಶ್ರಮದ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತರಿದ್ದರು. ಕವಯಿತ್ರಿ ಚಂದ್ರಾವತಿ ಬಡ್ಡಡ್ಕ ‘ಗಣರಾಜ್ಯೋತ್ಸವ ಕವಿಗೋಷ್ಠಿ’ಯ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಶಂಕರ ಪೆರಾಜೆ ಭಾಗವಹಿಸಿದರು. ಈ ಸಂದರ್ಭದಲ್ಲಿ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿಯವರ 199 ನೇ ಕೃತಿ ‘ಅಹಿಂಸಾ ಪರಮೋಧರ್ಮ’ ಎಂಬ ಕೃತಿಯನ್ನು ಬಿಡುಗಡೆ ಮಾಡಲಾಯಿತು. ಕಳೆದ ಹತ್ತು ವರ್ಷಗಳಿಂದ ಶಾರದಾ ವಿದ್ಯಾಲಯ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿರುವ ಶಾರದಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕವಿಗೋಷ್ಠಿಯಲ್ಲಿ ವಿದ್ಯಾರ್ಥಿಗಳಾದ ಗಾಯಿತ್ರಿ ಶೆಟ್ಟಿ, ನಯನ, ಅಫ್ಸಲ್, ಸುಶ್ಮಿತಾ ಕೆ. ಎಸ್, ಕೈಫಾ, ನಿಶ್ಚಿತ್, ಗೀತಾ, ಶಾಲಿನಿ ಭಾಗವಹಿಸಿದರು. ಎಲ್ಲರಿಗೂ ಅಭಿನಂದನಾ ಪತ್ರ ಮತ್ತು ಸಾಹಿತ್ಯ ಕೃತಿ ನೀಡಿ ಗೌರವಿಸಲಾಯಿತು. ಮಾನ್ಯ ಮತ್ತು ತಂಡ ಪ್ರಾರ್ಥಿಸಿದರು ಭೀಮರಾವ್ ವಾಷ್ಠರ್ ನಿರೂಪಿಸಿದರು.ಶಿಕ್ಷಕಿ ಹೇಮಲತಾ ವಂದಿಸಿದರು.

Digiqole Ad

ಶಿವಪ್ರಸಾದ್ ಮಣಿಯೂರು

https://goldfactorynews.com

ಈ ಸುದ್ದಿಗಳನ್ನೂ ಓದಿ