• 18 ಅಕ್ಟೋಬರ್ 2024

ಮಂಗಳೂರು: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ.

 ಮಂಗಳೂರು: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ.
Digiqole Ad

ಮಂಗಳೂರು: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ.

 

ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾಲೂಕಿನ ಕರ್ವಾಳು ಗ್ರಾಮದವರಾದ ಮನೋಹರ್ ಪ್ರಸಾದ್ ಅವರು 1984ರಲ್ಲಿ ಉದಯವಾಣಿಯ ಮಂಗಳೂರು ವರದಿಗಾರರಾಗಿ ಪತ್ರಿಕಾ ಜೀವನ ಆರಂಭಿಸಿದ್ದ ಇವರು ಆ ಬಳಿಕ ಪ್ರಧಾನ ವರದಿಗಾರರಾಗಿ, ಸುದ್ದಿ ವಿಭಾಗದ ಮುಖ್ಯಸ್ಥರಾಗಿ, ಸಹಾಯಕ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಉದಯವಾಣಿಯಲ್ಲಿ 36 ವರ್ಷಗಳ ಸಮರ್ಪಿತ ಸೇವೆಯನ್ನು ವ್ಯಾಪಿಸಿರುವ ಸುಪ್ರಸಿದ್ಧ ವೃತ್ತಿಜೀವನದೊಂದಿಗೆ ಅವರು ಎರಡು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಪತ್ರಿಕೋದ್ಯಮ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಯನ್ನು ಗುರುತಿಸಿ ಮನೋಹರ್ ಪ್ರಸಾದ್ ಅವರ ಅತ್ಯುತ್ತಮ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಅವಿವಾಹಿತರಾಗಿದ್ದ ಇವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ತುಳು, ಕೊಂಕಣಿ,ಕನ್ನಡ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಮೂರು ಸಾವಿರಕ್ಕೂ ಅಧಿಕ ಕಾರ್ಯಕ್ರಮಗಳಲ್ಲಿ ನಿರೂಪಣೆ, ತಾಳಮದ್ದಳೆ ಅರ್ಥಧಾರಿ, ಕ್ರಿಕೆಟ್ ಆಟಗಾರ, ಕ್ರಿಕೆಟ್ ವೀಕ್ಷಕ ವಿವರಕ, ಕತೆ-ಕಾದಂಬರಿಕಾರ, ಅಂಕಣಗಾರ ಹೀಗೆ ವಿವಿಧ ಮಜಲುಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿಸಿದ್ದರು.

Digiqole Ad

ಈ ಸುದ್ದಿಗಳನ್ನೂ ಓದಿ