ವಿಟ್ಲ : ಕರ್ನಾಟಕ ಬ್ಯಾಂಕ್ ದರೋಡೆ ಪ್ರಕರಣ; ನಾಲ್ಕು ಆರೋಪಿಗಳು ಅರೆಸ್ಟ್.!
ವಿಟ್ಲ : ಕರ್ನಾಟಕ ಬ್ಯಾಂಕ್ ದರೋಡೆ ಪ್ರಕರಣ; ನಾಲ್ಕು ಆರೋಪಿಗಳು ಅರೆಸ್ಟ್.!
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಅಡ್ಯನಡ್ಕದ ಕರ್ಣಾಟಕ ಬ್ಯಾಂಕ್ ನಲ್ಲಿ ಫೆ.7 ರಂದು ಕಟ್ಟಡದ ಹಿಂಬದಿಯ ಕಿಟಕಿ ಒಡೆದು ಬ್ಯಾಂಕಿನೊಳಗೆ ನುಗ್ಗಿದ ದರೋಡೆಕೋರರು ಚಿನ್ನ ಮತ್ತು ಸುಮಾರು 16 ಲಕ್ಷ ನಗದು ದೋಚಿದ ಪ್ರಕರಣ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿದ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತು ದ.ಕ.ಜಿಲ್ಲಾ ವಿಶೇಷ ಕ್ರೈಂ ಪೊಲೀಸರ ತಂಡ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರಿನ ಸಿಸಿ ಕ್ಯಾಮರಾದ ದೃಶ್ಯಾವಳಿಗಳನ್ನು ಆಧರಿಸಿ ಕೇರಳ ,ಮುಂಬಯಿ ,ಬೆಂಗಳೂರು ಕಡೆ ಕಾರ್ಯಾಚರಣೆ ನಡೆಸಿ ಕಾಸರಗೋಡು, ಬಂಟ್ವಾಳ, ಬೆಳ್ತಂಗಡಿ ನಿವಾಸಿಗಳು ಸೇರಿದಂತೆ ನಾಲ್ಕು ಜನ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಬ್ಯಾಂಕ್ ನಿಂದ ದರೋಡೆ ಮಾಡಿದ ಚಿನ್ನಾಭರಣಗಳನ್ನು ಹೊರ ರಾಜ್ಯದಲ್ಲಿ ಮಾರಾಟ ಮಾಡಿದ್ದು. ಅದನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದು. ಪ್ರಕರಣದಲ್ಲಿ ಇನ್ನೂ ಹಲವು ಮಂದಿ ಭಾಗಿಯಾಗಿರುವ ಕಾರಣ ಅವರಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.