• 8 ಸೆಪ್ಟೆಂಬರ್ 2024

ತುಳು ಭಾಷೆಗೆ ಮನ್ನಣೆ- ಹೋರಾಟಕ್ಕೆ ಸಜ್ಜಗಿ ತುಳು ಭಾಷಾ ಸಂಘಟನೆಗಳು

 ತುಳು ಭಾಷೆಗೆ ಮನ್ನಣೆ- ಹೋರಾಟಕ್ಕೆ ಸಜ್ಜಗಿ ತುಳು ಭಾಷಾ ಸಂಘಟನೆಗಳು
Digiqole Ad

ತುಳು ಭಾಷೆಗೆ ಮನ್ನಣೆ- ಹೋರಾಟಕ್ಕೆ ಸಜ್ಜಗಿ ತುಳು ಭಾಷಾ ಸಂಘಟನೆಗಳು

ತಾಲ್ಲೂಕು ಮಟ್ಟದಲ್ಲಿ ನಡೆಯಲಿವೆ ಹಕ್ಕೊತ್ತಾಯ ಸಭೆಗಳು ಮಂಗಳೂರು ತುಳುವನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು. ಈ ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಚೇದಕ್ಕೆ ಸೇರಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿ ಹೋರಾಟ ರೂಪಿಸಲು ವಿವಿಧ ತುಳು ಸಂಘಟನೆಗಳು ನಿರ್ಧರಿಸಿವೆ.

ಈ ಸುದ್ದಿ ಓದಿದ್ದೀರಾ?:ಕನಸೊಂದೇ ಶಾಶ್ವತ: ಕವಿ ಮನ

ತುಳುವಿನ ವಿವಿಧ ಸಂಘಟನೆಗಳ ಪ್ರಮುಖರು ಹೋರಾಟದ ರೂಪರೇಷೆಗಳ ಕುರಿತು ಇಲ್ಲಿನ ತುಳುಭವನದಲ್ಲಿ ಬುಧವಾರ ಸಮಾಲೋಚನೆ ನಡೆಸಿದರು.

ತುಳುವಿಗೆ ಸ್ಥಾನಮಾನ ಸಿಗಬೇಕೆಂಬ ಹೋರಾಟವನ್ನು ಸರ್ಕಾರಗಳು ಕಡೆಗಣಿಸುತ್ತಾ ಬಂದಿರುವ ಬಗ್ಗೆ ವಿವಿಧ ಸಂಘಟನೆಗಳ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು. ‘ರಾಜಕೀಯ ಇಚ್ಛಾಶಕ್ತಿಯ ಕೊರತೆಯ ಹೊರತು ಬೇರಾವ ಕಾರಣಗಲೂ ಇಲ್ಲ. ಚುನಾವಣೆ ಬರುವಾಗ ಎಲ್ಲ ರಾಜಕೀಯ ಪಕ್ಷಗಳಿಗೂ ತುಳು ನೆನಪಾಗುತ್ತದೆ. ಇದು ಇಲ್ಲಿಗೆ ಕೊನೆಯಾಗಬೇಕು. ತುಳುವಿಗ ಸ್ಥಾನಮಾನ ಒದಗಿಸುವ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು’ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?:ಜಗತ್ತಿನ ಅತೀ ಉದ್ದದ ಕಾರಿನಲ್ಲಿದೆ ಸ್ವಿಮ್ಮಿಂಗ್ ಪೂಲ್, ಹೆಲಿಪ್ಯಾಡ್

‘ತುಳು ವಿದ್ವಾಂಸ ಎಸ್.ಯು.ಪಣಿಯಾಡಿ ನೇತೃತ್ವದಲ್ಲಿ ತುಳುವಿಗೆ ಮನ್ನಣೆ ಕೊಡಿಸುವ ಹೋರಾಟ ರೂಪಿಸಲು ‘ತುಳುವ ಮಹಾಸಭೆ’ 94 ವರ್ಷಗಳ ಹಿಂದೆ ರೂಪುಗೊಂಡಿತ್ತು. ಇದಕ್ಕೆ 100 ವರ್ಷ ಸಲ್ಲುವ ಮುನ್ನ ಸಂವಿಧಾನದ 8ನೇ ಪರಿಚ್ಚೇದದಲ್ಲಿ ತುಳು ಸೇರಿರಬೇಕು’ ಎಂದು ತುಳು ಹೋರಾಟಗಾರ ರಾಜೇಶ್ ಆಳ್ವ ಸಲಹೆ ನೀಡಿದರು. ಇದಕ್ಕೆ ತುಳು ಹೋರಾಟದಲ್ಲಿ ಸಕ್ರಿಯರಗಿರುವ ಪ್ರಮುಖರೆಲ್ಲರೂ ಸಹಮತ ವ್ಯಕ್ತಪಡಿಸಿದರು.

ಸಭೆಯನ್ನು ಆಯೋಜಿಸಿದ್ದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ, ‘ತುಳುವಿಗೆ ರಾಜ್ಯದಲ್ಲಿ ಅಧಿಕೃತ ಭಾಷೆಯ ಸ್ಥಾನ ಹಾಗೂ ಸಂವಿಧಾನದ 8ನೇ ಪರಿಚ್ಚೇದದಲ್ಲಿ ಏಕೆ ಸ್ಥಾನ ಸಿಗಬೇಕು ಎಂಬುದಕ್ಕೆ ಪೂರಕ ದಾಖಲೆಗಳನ್ನು ಕ್ರೋಢೀಕರಿಸಲಿದ್ದೇವೆ. ಇದರಿಂದ ಸೇರಿದರೆ ತುಳುವರಿಗೆ ಆಗುವ ಅನುಕೂಲಗಳ ಬಗ್ಗೆಯೂ ಜಾಗೃತಿ ಮೂಡಿಸಲಿದ್ದೇವೆ. ಹೋರಾಟ ನಡೆಸದೇ ಯಾವುದೂ ದಕ್ಕದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿ ತಾಲ್ಲೂಕುಗಳಲ್ಲೂ ಈ ಕುರಿತ ಹಕ್ಕೊತ್ತಾಯ ಸಭೆಗಳನ್ನು ಹಮ್ಮಿಕೊಳ್ಳಲಿದ್ದೇವೆ. ಸಾಮೂಹಿಕ ನಾಯಕತ್ವದಲ್ಲಿ ಹೋರಾಟ ರೂಪಿಸಲಿದ್ದೇವೆ’ ಎಂದು ತಿಳಿಸಿದರು.

ಕೇರಳದ ರಾಜ್ಯಸಭಾ ಸದಸ್ಯ ಸಂತೋಷ್ ಕುಮಾ‌ರ್ ಕಣ್ಣೂರು, ‘ಸಂವಿಧಾನದ 8ನೇ ಪರಿಚ್ಛೇದದಲ್ಲಿ 23ನೇ ಭಾಷೆಯಾಗಿ ತುಳುವನ್ನು ಸೇರಿಸಲು ನಾನು ರಾಜ್ಯಸಭೆಯಲ್ಲಿ ಮಂಡಿಸಿರುವ ಖಾಸಗಿ ಮಸೂದೆ ಕುರಿತು ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದರೂ ಪ್ರತಿಕ್ರಿಯೆ ಬಂದಿಲ್ಲ. ತುಳುವಿಗೆ ಮನ್ನಣೆ ದೊರಕಿಸುವ ಹೋರಾಟದಲ್ಲಿ ನಾನೂ ನಿಮ್ಮೊಂದಿಗೆ ಇರುತ್ತೇನೆ’ ಎಂದು ಭರವಸೆ ನೀಡಿದರು.

ಸಮಾಲೋಚನೆ ಸಭೆಯನ್ನು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶೀಯ ಮೊಕ್ತೇಸರ ಹಾಗೂ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಉದ್ಘಾಟಿಸಿದರು. ಶಾಸಕ ಡಿ.ವೇದವ್ಯಾಸ ಕಾಮತ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ರಂಗಕರ್ಮಿ ವಿಜಯಕುಮಾರ್ ಕೊಡಿಯಾಲ್ ಬೈಲ್, ಉಡುಪಿ ತುಳುಕೂಟದ ಕೃಷ್ಣಮೂರ್ತಿ, ಇಂಗ್ಲೆಂಡ್‌ನ ತುಳುಕೂಟದ ಅರವಿಂದ ಶೆಟ್ಟಿ, ಪ್ರಮುಖರಾದ ಹರಿಕೃಷ್ಣ ಪುನರೂರು, ರಾಜೇಶ್ ಆಳ್ವ, ಫ್ರಾಂಕ್ಲಿನ್ ಡಿಸೋಜ, ಶಶಿ ಬಂಡಿಮಾರ್, ಪ್ರದೀಪ್ ಕುಮಾರ್ ಕಲ್ಕೂರ, ಕಾಂತಪ್ಪ, ಪ್ರಶಾಂತ, ಯೋಗೀಶ್ ಶೆಟ್ಟಿ ಜೆಪ್ಪು, ದಯಾನಂದ ಕತ್ತಲಸಾರ್, ವಿಶು ಶ್ರೀ.ಕೆ. ರೋಷನ್ ಮೊದಲಾದವರು ಸಲಹೆ ಸೂಚನೆ ನೀಡಿದರು. ಮಧುರಾಜ್ ನಿರೂಪಿಸಿದರು. ಸುಧಾಕ‌ರ್ ವಂದಿಸಿದರು.

Digiqole Ad

ಈ ಸುದ್ದಿಗಳನ್ನೂ ಓದಿ