• 27 ಜುಲೈ 2024

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಸಂಭ್ರಮ- ಸಮಾಲೋಚನಾ ಸಭೆ

 ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಸಂಭ್ರಮ- ಸಮಾಲೋಚನಾ ಸಭೆ
Digiqole Ad

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಸಂಭ್ರಮ- ಸಮಾಲೋಚನಾ ಸಭೆ

ಕಡಬ ತಾಲೂಕು ಕಾಣಿಯೂರುಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ(ರಿ)ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಐವತ್ತು ವರ್ಷಗಳನ್ನು ಪೂರೈಸಿದ್ದು ಸುವರ್ಣ ಸಂಭ್ರಮವನ್ನು ಆಚರಿಸುವ ಬಗ್ಗೆ ಸಮಾಲೋಚನಾ ಸಭೆಯು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಭಜನಾ ಮಂಡಳಿಯ ಅಧ್ಯಕ್ಷರಾದ ಪುಟ್ಟಣ್ಣ ಗೌಡ ಮುಗರಂಜ ಮಾತನಾಡಿ, ಎಲ್ಲರ ಸಹಕಾರದಿಂದ, ಎಲ್ಲರೂ ಒಗ್ಗೂಡಿ ಭಜನಾ ಮಂಡಳಿಯ ಐವತ್ತರ ಸಂಭ್ರಮದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ಮಾತನಾಡಿ, ಹಿರಿಯರ ಸತತ ಪರಿಶ್ರಮ ಮತ್ತು ಸರ್ವರ ಸಹಕಾರದಿಂದ ಭಜನಾ ಮಂಡಳಿಯು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಭಜನಾ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.

ಈ ಸುದ್ದಿ ಓದಿದ್ದೀರಾ?:ಸೊಸೆಯ ಕತ್ತು ಸೀಳಿ ಬಳಿಕ ಮಾವ ಆತ್ಮಹತ್ಯೆ

ಸುವರ್ಣ ಮಹೋತ್ಸವದ ಆರಂಭದ ಕಾರ್ಯಕ್ರಮವಾಗಿ ಏಪ್ರಿಲ್ 9ರ ಚಂದ್ರಮಾನ ಯುಗಾದಿಯಂದು ನಗರ ಭಜನೆ ಪ್ರಾರಂಭಗೊಂಡು, ಮೇ 21,22ರಂದು ಏಕಾಹ ಭಜನೆ, ಗಣಹೋಮ,ನರಸಿಂಹ ಜಯಂತಿ ಪೂಜೆ, ದುರ್ಗಾ ಪೂಜೆ,ಸತ್ಯನಾರಾಯಣ ಪೂಜೆ ಹಾಗೂ ನಗರ ಭಜನಾ ಮಂಗಳೋತ್ಸವ ನಡೆಯಲಿದ್ದು, ನಂತರದ ದಿನಗಳಲ್ಲಿ ಹಲವು ಕಾರ್ಯಕ್ರಮಗಳು ನಡೆದು ಡಿಸೆಂಬ‌ರ್ ತಿಂಗಳಲ್ಲಿ ಭಜನಾ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

 ಸುವರ್ಣ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಪದ್ಮಯ್ಯ ಗೌಡ ಅನಿಲ ಮಾತನಾಡಿ, ವಿವಿಧ ಕಾರ್ಯಕ್ರಮಗಳನ್ನು ಜೋಡಿಸಿಕೊಂಡು, ಕಾರ್ಯಕ್ರಮಗಳಲ್ಲಿ ಪರಿಸರದ ಎಲ್ಲಾ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಸುವರ್ಣ ಮಹೋತ್ಸವದ ಸಂಭ್ರಮವನ್ನು ಇಡೀ ಊರಿನ ಹಬ್ಬವನ್ನಾಗಿ ಮಾಡೋಣ ಎಂದರು. ಕಾರ್ಯಕ್ರಮದ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ ಎಂದರು. ಭಜನಾ ಮಂಡಳಿಯ ಕೋಶಾಧಿಕಾರಿ ಕೀರ್ತಿ ಕುಮಾರ್ ಏಳುವೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಜನಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಯಂತ ಅಬೀರ ಸ್ವಾಗತಿಸಿದರು. ಮಾಜಿ ಅಧ್ಯಕ್ಷ, ಪರಮೇಶ್ವರ ಅನಿಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಭಜನಾ ಮಂಡಳಿಯ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದು, ಸಲಹೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ?:ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ(ರಿ)ಕಾಣಿಯೂರು

www.goldfactorynews.com

Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.

Digiqole Ad

ಈ ಸುದ್ದಿಗಳನ್ನೂ ಓದಿ