• 8 ಸೆಪ್ಟೆಂಬರ್ 2024

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ತಮ್ಮ ೬ನೇ ದಿನ

 ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ತಮ್ಮ ೬ನೇ ದಿನ
Digiqole Ad

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ತಮ್ಮ ೬ನೇ ದಿನ

ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಕ್ಷೇತ್ರಪ್ರವಾಸವನ್ನು ಮರೋಳಿಯ ಶ್ರೀ ಸೂರ್ಯನಾರಾಯಣ ದೇವರ ಆಶೀರ್ವಾದ ಪಡೆಯುವ ಮೂಲಕ ಆರಂಭಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು, ಆಟೋ ಚಾಲಕರನ್ನು ಭೇಟಿಮಾಡಿ ಅವರ ಕಷ್ಟಸುಖಗಳನ್ನು ವಿಚಾರಿಸಿದ ಕ್ಯಾಪ್ಟನ್‌, ನಂತರದಲ್ಲಿ ಕರಾವಳಿಯ ಸಾಮಾಜಿಕ ಸುಧಾರಣೆಗೆ ತಮ್ಮದೇ ಆದ ಕೊಡುಗೆ ನೀಡಿದ, ಗಾಂಧಿಜಿಯವರಿಗೂ ಸ್ಫೂರ್ತಿಯಾಗಿದ್ದ ದಿವ್ಯ ಚೇತನ ಶ್ರೀ ಕುದ್ಮುಲ್‌ ರಂಗರಾವ್‌ ಅವರ ನಂದಿಗುಡ್ಡದ ಸ್ಮಾರಕಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ?:ಮುಜರಾಯಿ ದೇವಸ್ಥಾನಗಳ ನೌಕರ’ರಿಗೆ ಶುಭ ಸುದ್ದಿ

ತದನಂತರ, ಮರಕಡದ ದೇವಂದಗುಡ್ಡೆಯಲ್ಲಿ ಹಮ್ಮಿಕೊಳ್ಳಲಾಗಿದ್ದ, ಮಹತೋಭಾ ಶ್ರೀ ಸೋಮನಾಥೇಶ್ವರ ಮಹಿಷಮರ್ಧಿನಿ ದೇವಸ್ಥಾನದ ಪುನರ್‌ ನಿರ್ಮಾಣದ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಮಠ ಎಡನೀರು ಕ್ಷೇತ್ರದ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ.ಭರತ್‌ ಶೆಟ್ಟಿ ಅವರೊಂದಿಗೆ ಸ್ಥಳೀಯ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.

ನಂತರ, ಕುದ್ರೋಳಿಯ ಗೋಕರ್ಣನಾಥೇಶ್ವರ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದ ನಂತರ, ಕಾರ್ಯಕರ್ತರ ಜೊತೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ ಕಾಮತ್‌ ಅವರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ಸಂಕೀರ್ಣಕ್ಕೆ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ ಕ್ಯಾಪ್ಟನ್. ಬಿಜೇಶ್‌ ಚೌಟ ಅವರು ಭೇಟಿ ನೀಡುವ ಮೂಲಕ ಅಲ್ಲಿ ನೆರೆದಿದ್ದ ವಕೀಲರ ಮಿತ್ರ ಸಮೂಹವನ್ನು ಭೇಟಿಮಾಡಿ ಕುಶಲೋಪರಿ, ಸಂವಾದವನ್ನು ನಡೆಸಿದರು.

ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ರಾಜೀವ್‌ ನಗರ ಕಾಲನಿಗೆ ಭೇಟಿ ಕೊಟ್ಟು ಮತದಾರರೊಂದಿಗೆ ಕುಶಲೋಪರಿ ನಡೆಸಿದ ಕ್ಯಾಪ್ಟನ್‌ ಅವರು ಇದೇ ಸಂದರ್ಭದಲ್ಲಿ ಸೆಂಟ್ರಲ್‌ ವಾರ್ಡ್‌ ನ ಬೂತ್‌ ಅಧ್ಯಕ್ಷರಾದ ಶ್ರೀ ಉಮೇಶ್‌ ಅವರ ಮನೆಗೆ ಭೇಟಿ ನೀಡಿದರು.ಬಳಿಕ, ನಗರದ ದಕ್ಷಿಣ ಮಂಡಲದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಹಿರಿಯರೂ, ಮಾಜಿ ವಿಧಾನ ಪರಿಷತ್‌ ಸದಸ್ಯರು ಆದ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌, ಮಾಜಿ ಮಂತ್ರಿಗಳಾದ ಶ್ರೀ ಬಿ,ನಾಗರಾಜ ಶೆಟ್ಟಿ, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳೀನ್‌ ಕುಮಾರ್‌ ಕಟೀಲ್‌, ಬಿಜೆಪಿಯ ಜಿಲ್ಲಾದ್ಯಕ್ಷರಾದ ಸತೀಶ್‌ ಕುಂಪಲ, ಸ್ಥಳೀಯ ಶಾಸಕರಾದ ಶ್ರೀ ವೇದವ್ಯಾಸ್‌ ಕಾಮತ್‌ ಅವರೊಂದಿಗೆ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ?:ಶಾಲೆಯಲ್ಲಿ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆ

www.goldfactorynews.com

Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.

Digiqole Ad

ಈ ಸುದ್ದಿಗಳನ್ನೂ ಓದಿ