ನಾಳೆಯಿಂದ ನಾಮಪತ್ರ ಸಲ್ಲಿಕೆ: ದ.ಕ. ಜಿಲ್ಲಾಧಿಕಾರಿ
![ನಾಳೆಯಿಂದ ನಾಮಪತ್ರ ಸಲ್ಲಿಕೆ: ದ.ಕ. ಜಿಲ್ಲಾಧಿಕಾರಿ](https://goldfactorynews.com/wp-content/uploads/2024/03/1500x900_1256295-img-20240327-wa0047-850x560.webp)
![Digiqole Ad](https://goldfactorynews.com/wp-content/uploads/2023/04/crust-puttur.gif)
ನಾಳೆಯಿಂದ ನಾಮಪತ್ರ ಸಲ್ಲಿಕೆ: ದ.ಕ. ಜಿಲ್ಲಾಧಿಕಾರಿ
ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು ಏ.4 ಕೊನೆಯ ದಿನ ಎಂದು ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಏ.5ರಂದು ನಾಮಪತ್ರ ಪರಿಶೀಲನೆ, ಏ.8ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಏ.26ರಂದು ಮತದಾನ ನಡೆಯಲಿದೆ. ಮಾ.29&31 ರಜಾ ದಿನ ಹೊರತುಪಡಿಸಿ ಮಾ.28ರಿಂದ ಏ.4ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಕೆ ಮಾಡಬಹುದು ಎಂದು ಅವರು ಎಂದು ಹೇಳಿದ್ದಾರೆ.
![Digiqole Ad](https://goldfactorynews.com/wp-content/uploads/2023/10/goldfactory_self.gif)