• 27 ಜುಲೈ 2024

ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಕ್ರೈಸ್ತ ಬಾಂಧವರಿಂದ ಗುಡ್ ಪ್ರೈಡೆ ಆಚರಣೆ.

 ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಕ್ರೈಸ್ತ ಬಾಂಧವರಿಂದ ಗುಡ್ ಪ್ರೈಡೆ ಆಚರಣೆ.
Digiqole Ad

ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಕ್ರೈಸ್ತ ಬಾಂಧವರಿಂದ ಗುಡ್ ಪ್ರೈಡೆ ಆಚರಣೆ.

ಉಡುಪಿ:ಮಾ.29. ಕ್ರೈಸ್ತ ಭಾಂಧವರಿಗೆ ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಪ್ರೈಡೆ)ವನ್ನು ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಿದರು. ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಬೆಳಿಗ್ಗಿನಿಂದಲೇ ಪ್ರಾರ್ಥನೆ, ಧ್ಯಾನ,ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆದು, ಕ್ರೈಸ್ತ ಬಾಂಧವರು ಬೆಳಿಗ್ಗಿನಿಂದಲೇ ಉಪವಾಸವನ್ನು ಕೈಗೊಂಡು ದಿನವಿಡೀ ಯೇಸು ದೇವನನ್ನು ಶಿಲುಬೆಗೇರಿಸುವ ಘಟನಾವಳಿಗಳನ್ನು ಮೆಲುಕು ಹಾಕುವುದರ ಮೂಲಕ ಸ್ಮರಿಸಿದರು.

ಈ ಸುದ್ದಿಯನ್ನು ಓದಿದ್ದೀರಾ.?ಭಾರತದ ಹೆಮ್ಮೆಯ ಕಾರ್ಗಿಲ್ ಕದನವೀರರ ಸಾಹಸಗಾಥೆಗಳು

ಉಡುಪಿ ಧರ್ಮಪ್ರಾಂತ್ಯದ ಪ್ರಧಾನ ದೇವಾಲಯವಾದ ಮಿಲಾಗ್ರಿಸ್‌ ಕ್ಯಾಥೆಡ್ರಲ್ ನಲ್ಲಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಶುಭ ಶುಕ್ರವಾರದ ಪ್ರಾರ್ಥನಾವಿಧಿಯನ್ನು ನಡೆಸಿದರು.

ಈ ಸುದ್ದಿಯನ್ನು ಓದಿದ್ದೀರಾ.?ಸಂಬಳ ಇಲ್ಲದೆ ದುಡಿಯುತ್ತಿರುವ 108 ಆರೋಗ್ಯ್ ಕವಚ ಸಿಬ್ಬಂದಿ     

ಜಿಲ್ಲೆಯ ಕೆಲವು ಚರ್ಚುಗಳಲ್ಲಿ ಯೇಸುಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನುಪ್ಪುವ ಘಟನಾವಳಿಗಳನ್ನು ಪ್ರಸ್ತುತಪಡಿಸಿದರು. ಧರ್ಮಗುರುಗಳು ರಕ್ತವರ್ಣದ ಪೂಜಾಬಟ್ಟೆ ಧರಿಸಿ ಯೇಸು ಕ್ರಿಸ್ತರ ಕೊನೆಯ ಘಳಿಗೆಗಳ ವೃತ್ತಾಂತ ವಾಚಿಸಿದರು. ಬಳಿಕ ಮುಚ್ಚಲ್ಪಟ್ಟ ಶಿಲುಬೆಯನ್ನು ಮೆರವಣಿಗೆಯಲ್ಲಿ ತಂದು ಅನಾವರಣಗೊಳಿಸಿದರು.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ