• 8 ಸೆಪ್ಟೆಂಬರ್ 2024

ಕಿರಾತಕ ಖ್ಯಾತಿಯ ಖ್ಯಾತ ಖಳನಟ ಡೇನಿಯಲ್ ಬಾಲಾಜಿ ಇನ್ನಿಲ್ಲ;ಚಿತ್ರರಂಗಕ್ಕೆ ಆಘಾತ.

 ಕಿರಾತಕ ಖ್ಯಾತಿಯ ಖ್ಯಾತ ಖಳನಟ ಡೇನಿಯಲ್ ಬಾಲಾಜಿ ಇನ್ನಿಲ್ಲ;ಚಿತ್ರರಂಗಕ್ಕೆ ಆಘಾತ.
Digiqole Ad

ಕಿರಾತಕ ಖ್ಯಾತಿಯ ಖ್ಯಾತ ಖಳನಟ ಡೇನಿಯಲ್ ಬಾಲಾಜಿ ಇನ್ನಿಲ್ಲ;ಚಿತ್ರರಂಗಕ್ಕೆ ಆಘಾತ.

ಬಹುಭಾಷಾ ನಟ ಡ್ಯಾನಿಯಲ್ ಬಾಲಾಜಿ ಮಾ.30 ಶನಿವಾರ ವಿಧಿವಶರಾಗಿದ್ದಾರೆ. ಯಶ್ ನಟಿಸಿದ ಕನ್ನಡದ ‘ಕಿರಾತಕ’ ಸಿನಿಮಾದಲ್ಲಿ ಖಳನಾಯಕನಾಗಿ ನಟಿಸಿದ್ದರು. ಈ ಸಿನಿಮಾ ಮೂಲಕ ಕರುನಾಡಿನಲ್ಲಿ ಹೆಚ್ಚು ಜನಪ್ರಿಯರಾಗಿದ್ದರು. ದಿಢೀರನೇ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು. ಮಾರ್ಚ್ 29ರಂದು ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಈ ಸುದ್ದಿಯನ್ನು ಓದಿದ್ದೀರಾ.?ಸಶಸ್ತ್ರ ಪಡೆಗಳ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಿಕಿತ್ಸೆ ಫಲಕಾರಿಯಾಗದ ಕಾರಣ ಶನಿವಾರ (ಮಾರ್ಚ್ 30) ಅವರು ಕೊನೆಯುಸಿರು ಎಳೆದಿದ್ದಾರೆ. ಚೆನ್ನೈನ ಪುರಸೈವಾಲ್ಕಂನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರೆ. ನಟ ಡೇನಿಯಲ್ ಬಾಲಾಜಿ ಕನ್ನಡ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಕುಟುಂಬ ಸದಸ್ಯರಾಗಿದ್ದು, ಚಿತ್ರಗಳಲ್ಲಿ ಖಳನಾಯಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ರಾಕಿಂಗ್ ಸ್ಟಾರ್ ಯಶ್ ನಟನೆಯ ಕಿರಾತಕ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪನೆಯಾಗಿದ್ದರು. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ ಡೇನಿಯಲ್ ಬಾಲಾಜಿ ಕನ್ನಡದಲ್ಲಿ ಕಿರಾತಕ, ಶಿವಾಜಿನಗರ, ಬೆಂಗಳೂರು ಅಂಡರ್‌ವರ್ಲ್ಡ್ ಹಾಗೂ ಡವ್ ಸಿನಿಮಾಗಳಲ್ಲಿ ನಟಿಸುವ ಮೂಲಕ ಕನ್ನಡ ಸಿನಿಪ್ರಿಯರಿಗೆ ಮೆಚ್ಚುಗೆಯಾಗಿದ್ದರು. ತಮಿಳು ಸೀರಿಯಲ್ ಚಿತ್ತಿಯಲ್ಲಿ ನಟಿಸುವ ಮೂಲಕ ಬಣ್ಣದ ಲೋಕ ಪ್ರವೇಶಿಸಿದ ಡ್ಯಾನಿಯಲ್ ಬಾಲಾಜಿ ಕಮಲ್ ಹಾಸನ್ ನಟನೆಯ ‘ವೆಟ್ಟೆಯಾಡು ವಿಲೈಯಾಡು’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದರು. ಈ ಮೂಲಕ ಮೆಚ್ಚುಗೆ ಪಡೆದರು. ಸಿನಿಮಾ ರಂಗ ಹೊರತುಪಡಿಸಿ ಧಾರ್ಮಿಕ ಕಾರ್ಯಗಳಲ್ಲೂ ಡೇನಿಯಲ್ ಬಾಲಾಜಿ ಸಕ್ರಿಯರಾಗಿದ್ದು, ಅನೇಕ ದೇವಾಲಯಗಳನ್ನು ಕಟ್ಟಿಸಿದ್ದಾರೆ. ನಟನ ಅಗಲಿಕೆಗೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.

ಈ ಸುದ್ದಿಯನ್ನು ಓದಿದ್ದೀರಾ.?ಗೋವಾ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಯ ಸ್ಪರ್ಧೆ

ಚೆನ್ನೈನ ಪುರಸೈವಾಲ್ಕಂನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ತಿರುವನ್ನಿಯೂರಿನ ಅವರ ನಿವಾಸದಲ್ಲಿ ನಡೆಯಲಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ನಟ ಡೇನಿಯಲ್ ಬಾಲಾಜಿ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಈ ವಿಚಾರ ಅಭಿಮಾನಿಗಳನ್ನು ಮತ್ತಷ್ಟು ಭಾವುಕವಾಗಿಸಿದೆ. ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಡೇನಿಯಲ್ ಬಾಲಾಜಿ ಕತ್ತಲೆಯಲ್ಲಿದವರ ಬಾಳನ್ನು ಬೆಳಕಾಗಿಸಿದ್ದಾರೆ. ಸಾವಿನ ಸುದ್ದಿ ಕೇಳಿ ಆತಂಕದಲ್ಲಿದ್ದ ಅಭಿಮಾನಿಗಳು ಈ ವಿಷಯ ಕೇಳಿ ಮತ್ತಷ್ಟು ಭಾವುಕರಾಗಿದ್ದಾರೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

.

Digiqole Ad

ಈ ಸುದ್ದಿಗಳನ್ನೂ ಓದಿ