• 8 ಸೆಪ್ಟೆಂಬರ್ 2024

ನಳಿನ್ ಕುಮಾರ್ ಕಟೀಲ್ ನಂ.1 ಸಂಸದರಾಗಿದ್ದು ಹೌದಾದರೆ ಟಿಕೆಟ್ ಸಿಕ್ಕಿಲ್ಲ ಯಾಕೆ..? ಅಭಯಚಂದ್ರ ಜೈನ್ ವ್ಯಂಗ್ಯ.

 ನಳಿನ್ ಕುಮಾರ್ ಕಟೀಲ್ ನಂ.1 ಸಂಸದರಾಗಿದ್ದು ಹೌದಾದರೆ ಟಿಕೆಟ್ ಸಿಕ್ಕಿಲ್ಲ ಯಾಕೆ..? ಅಭಯಚಂದ್ರ ಜೈನ್ ವ್ಯಂಗ್ಯ.
Digiqole Ad

ನಳಿನ್ ಕುಮಾರ್ ಕಟೀಲ್ ನಂ.1 ಸಂಸದರಾಗಿದ್ದು ಹೌದಾದರೆ ಟಿಕೆಟ್ ಸಿಕ್ಕಿಲ್ಲ ಯಾಕೆ..? ಅಭಯಚಂದ್ರ ಜೈನ್ ವ್ಯಂಗ್ಯ.

ಮಂಗಳೂರು. ಮಾ.30: ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲೆ ನಂ1 ಸಂಸದ ಎಂಬುದಾಗಿ ಬಿಂಬಿಸಸುತ್ತಿದ್ದಾರೆ. ಹಾಗಿದ್ದರೆ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಯಾಕೆ ಸಿಕ್ಕಿಲ್ಲ? ಎಂದು ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ಅಭಯ ಚಂದ್ರ ಜೈನ್ ಅವರು ಪ್ರಶ್ನೆ ಮಾಡಿದ್ದಾರೆ. ಶನಿವಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಳಿನ್ ಸಂಸದರಾಗಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ.

ಈ ಸುದ್ದಿಯನ್ನು ಓದಿದ್ದೀರಾ.?ಅಧಿಕೃತವಾಗಿ ಬಿಜೆಪಿಗೆ ಮರು ಸೇರ್ಪಡೆಗೊಂಡ ಗಣಿಧಣಿ ಜನಾರ್ಧನ ರೆಡ್ಡಿ

ಕಾಂಗ್ರೆಸ್ ಕಾಲದಲ್ಲಿ ಮಾತ್ರ ಕಣ್ಣಿಗೆ ಕಾಣುವಂತಹ ಅಭಿವೃದ್ಧಿ ಕೆಲಸಗಳು ನಡೆದಿದ್ದು, ಕಾಂಗ್ರೆಸ್ ಕಾಲದಲ್ಲಿ ಆರಂಭವಾಗಿದ್ದ ಕೆಲವು ಕಾಮಗಾರಿಗಳನ್ನು ಪೂರ್ಣಗೊಳಿಸುವುದು ಕೂಡ ಬಿಜೆಪಿಯವರಿಂದ ಸಾಧ್ಯವಾಗಿಲ್ಲ. ಬಿಜೆಪಿ ಕೇವಲ ಪ್ರಚಾರ, ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಚುನಾವಣೆ ಗೆಲ್ಲುತ್ತಿದೆ. ಜನಸಾಮಾನ್ಯರಿಗೆ ಯಾವುದೆ ಅನುಕೂಲ ಮಾಡಿಕೊಟ್ಟಿಲ್ಲ. ಇದು ಈಗ ಜನರಿಗೆ ಅರ್ಥವಾಗುತ್ತಿದ್ದು. ಈ ಬಾರಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಬೆಲೆ ಹೆಚ್ಚಳ, ಜಿಎಸ್ ಟಿ ಮೊದಲಾದವುಗಳಿಂದ ಜನ ಸಂಕಷ್ಟದಲ್ಲಿದ್ದಾರೆ, ಪ್ರಧಾನಿ ಮೋದಿ, ಬಿಜೆಪಿಯವರು ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಯುವಕರು ಮೋದಿಯ ಭಾಷಣಕ್ಕೆ ಮರುಳಾಗುತ್ತಿದ್ದು. ಅವರಿಗೆ ಕಾಂಗ್ರೆಸ್ ದೇಶಕ್ಕೆ ನೀಡಿದ ಕೊಡುಗೆಯನ್ನು ತಿಳಿಸಬೇಕಾದ ಅವಶ್ಯಕತೆ ಇದೆ ಎಂದರು. ದೇಶಕ್ಕಾಗಿ ಮೋದಿಗೆ ಮತ ಎನ್ನುತ್ತಾರೆ, ಹಾಗಾದರೆ ನಮ್ಮ ದೇಶ ಈಗ ಸ್ವತಂತ್ರವಾಗಿಲ್ಲವೆ? ನಾವು ಇಷ್ಟರವರೆಗೆ ಊಟ ಮಾಡುತ್ತಿರಲಿಲ್ಲವೆ? ರಕ್ಷಣೆ ಇರಲಿಲ್ಲವೆ ? ಬಡತನ ನಿರ್ಮೂಲನೆ ಮಾಡಿದ್ದು ಕಾಂಗ್ರೆಸ್ ಸರಕಾರ.

ಈ ಸುದ್ದಿಯನ್ನು ಓದಿದ್ದೀರಾ.?ಆಜಾನ್ ಮುಗಿದ ಬಳಿಕ ಮೈಕ್ ಆಫ್ ಮಾಡಲು ಮರೆತ ಮೌಲ್ವಿ ಇನ್ನೇನಾಯ್ತು ನೀವೇ ನೋಡಿ..

ಮಂಗಳೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪ್ರಾಮಾಣಿಕ, ಸರಳತೆಯ ಪದ್ಮರಾಜ್‌ ಅವರನ್ನು ಕಣಕ್ಕಿಳಿಸಿದ್ದು ಅವರ ಗೆಲುವು ನಿಶ್ಚಿತ. ಬಿಜೆಪಿ ಸುಳ್ಳನ್ನೇ ಬಂಡವಾಳ ಮಾಡಿಕೊಂಡಿದೆ. ಹಿಂದುತ್ವದ ಕೋಟೆ ಬೇಧಿಸಿ ಜಯಗಳಿಸುತ್ತವೆ. ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್‌ ತೆಕ್ಕೆಗೆ ತರುತ್ತೇವೆ ಎಂದರು. ಮೊಯಿಲಿಯವರಿಗೆ ಈ ಬಾರಿ ಟಿಕೆಟ್ ಸಿಗದಿರುವ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ವಯಸ್ಸಿನ ಕಾರಣಕ್ಕೆ ಮೊಯಿಲಿಯವರಿಗೆ ಟಿಕೆಟ್ ನೀಡಿಲ್ಲ. ಅವರಲ್ಲಿ ಜಾತಿ, ಹಣ ಬಲವೂ ಇಲ್ಲ. ಆದರೆ ಅವರಲ್ಲಿ ಇನ್ನೂ ಕೂಡ ಕೆಲಸ ಮಾಡುವ ಶಕ್ತಿ, ಹುಮ್ಮಸ್ಸು ಇದೆ ಎಂದುರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷರಾದ ಶುಭೋದಯ ಆಳ್ವ, ನೀರಜ್‌ ಪಾಲ್‌, ಪ್ರಧಾನ ಕಾರ್ಯದರ್ಶಿಗಳಾದ ಟಿ.ಕೆ.ಸುಧೀರ್, ವಿಕಾಸ್‌ ಶೆಟ್ಟಿ, ಕಾರ್ಯದರ್ಶಿ ನಝೀರ್ ಬಜಾಲ್ ಭಾಗಿಯಾಗಿದ್ದರು.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ