ದ.ಕ., ಉಡುಪಿಯಲ್ಲಿ ನಾಳೆ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
![ದ.ಕ., ಉಡುಪಿಯಲ್ಲಿ ನಾಳೆ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ](https://goldfactorynews.com/wp-content/uploads/2024/04/IMG-20240402-WA0067-696x560.webp)
![Digiqole Ad](https://goldfactorynews.com/wp-content/uploads/2023/04/crust-puttur.gif)
ದ.ಕ, ಉಡುಪಿಯಲ್ಲಿ ನಾಳೆ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
ದಕ್ಷಿಣ ಕನ್ನಡ &ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳು ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಪದ್ಮರಾಜ್ ಬೆಳಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಿದ್ದು ಇದಕ್ಕೂ ಮೊದಲು ಕುದ್ರೋಳಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಎಬಿ ಶೆಟ್ಟಿ ಸರ್ಕಲ್ ಬಳಿ ಸಮಾವೇಶಗೊಳ್ಳಲಿದೆ. ನಂತರ ನಾಮಪತ್ರ ಸಲ್ಲಿಸಲಿದ್ದಾರೆ. ಉಡುಪಿಯಲ್ಲಿ ಜಯಪ್ರಕಾಶ್ ಹೆಗ್ಡೆ ಅವರು ಬೆಳಗ್ಗೆ 10ಕ್ಕೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪ್ರಮುಖರ ಸಭೆ ನಡೆಸಿ ಬಳಿಕ ಪಕ್ಷದ ನಾಯಕರೊಂದಿಗೆ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
![Digiqole Ad](https://goldfactorynews.com/wp-content/uploads/2023/10/goldfactory_self.gif)