• 27 ಜುಲೈ 2024

ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವಾರ್ಷಿಕ 1.65 ಕೋಟಿ ನಿವ್ವಳ ಲಾಭ 

 ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವಾರ್ಷಿಕ 1.65 ಕೋಟಿ ನಿವ್ವಳ ಲಾಭ 
Digiqole Ad

ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವಾರ್ಷಿಕ 1.65 ಕೋಟಿ ನಿವ್ವಳ ಲಾಭ 

ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು 22 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ ತಾಲೂಕಿನಲ್ಲಿರುವ 14 ಶಾಖೆಗಳಲ್ಲಿ ತನ್ನ ಗ್ರಾಹಕರಿಗೆ ಉತ್ತಮ ಸೇವೆ ನೀಡಿಕೊಂಡು ಬರುತ್ತಿದ್ದು, 2023-24 ನೇ ಸಾಲಿನ ಆರ್ಥಿಕ ವರ್ಷದಲ್ಲಿ ತನ್ನ ಸಂಘದ ಸದಸ್ಯರ ಸಹಕಾರದಿಂದ ಅತ್ಯುತ್ತಮ ಕಾರ್ಯದಕ್ಷತೆಯ ಮೂಲಕ ಸಂಘವು 728 ಕೋಟಿ ರೂ. ಗಳ ದಾಖಲೆ ಮೊತ್ತದ ವ್ಯವಹಾರವನ್ನು ನಡೆಸಿ 1.65 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಮೊದಲ ಮಳೆ

ಸಂಘದ 2023-24ನೇ ಆರ್ಥಿಕ ವರ್ಷದ ಸಾಲಿನ ಅಂತ್ಯಕ್ಕೆ ಸಂಘದಲ್ಲಿ ಒಟ್ಟು 8,524 ಸದಸ್ಯರಿದ್ದು ಒಟ್ಟು 3.22 ಕೋಟಿ ರೂ. ಗಳಷ್ಟು ಪಾಲು ಬಂಡವಾಳವನ್ನು ಹೊಂದಿದ್ದು ಸಂಘವು 131.93 ಕೋಟಿ ರೂ. ಠೇವಣಿಯನ್ನು ಹೊಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.13.36 ರಷ್ಟು ಹೆಚ್ಚಾಗಿರುತ್ತದೆ . ಸಂಘವು 2.30 ಕೋಟಿ ರೂ.ಗಳಷ್ಟು ಕ್ಷೇಮ ನಿಧಿ ಮತ್ತು 1.97 ಕೋಟಿ ರೂ. ಗಳಷ್ಟು ಇತರ ನಿಧಿಗಳನ್ನು ಹೊಂದಿದೆ ಎಂದರು.

ಸಂಘವು ಸ್ಥಾಪನೆಗೊಂಡ ವರ್ಷದಿಂದ ಸದಸ್ಯರಿಗೆ ಡಿವಿಡೆಂಡ್ ನೀಡುತ್ತಿದ್ದು ಆಡಿಟ್ ವರ್ಗದಲ್ಲಿ ಸತತವಾಗಿ “ಎ” ತರಗತಿಯನ್ನು ಕಾಯ್ದುಕೊಂಡು ಬಂದಿರುತ್ತದೆ.

ಸಂಘದ ಕೇಂದ್ರ ಕಚೇರಿಗೆ ಸ್ವಂತ ಕಟ್ಟಡವನ್ನು ಹೊಂದುವ ಉದ್ದೇಶದಿಂದ ಸವಣೂರು ಗ್ರಾಮದಲ್ಲಿ 75 ಸೆಂಟ್ಸ್ ನಿವೇಶನವನ್ನು ಸಂಘದ ಹೆಸರಿನಲ್ಲಿ ಖರೀದಿಸಿದ್ದು, ಕಚೇರಿ ಕಾಮಗಾರಿ ಪ್ರಗತಿಯಲ್ಲಿದೆ. 2024-25 ನೇ ಸಾಲಿನಲ್ಲಿ ಮಂಗಳೂರಿನಲ್ಲಿ ಹೊಸ ಶಾಖೆ ತೆರೆಯುವ ಯೋಜನೆಯನ್ನು ಹೊಂದಿರುವುದಾಗಿ ಸ್ಥಾಪಕ ಅಧ್ಯಕ್ಷರಾದ ಕೆ.ಸೀತಾರಾಮ ರೈ ಹೇಳಿದರು.

ಸಂಘದ ಪ್ರಗತಿ ಮತ್ತು ಸೇವೆಯನ್ನು ಪರಿಗಣಿಸಿ ಮಂಗಳೂರಿನಲ್ಲಿ ನಡೆದ 64 ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ “ಅತ್ಯುತ್ತಮ ಸಹಕಾರ ಸಂಘ” ವೆಂದು ಪ್ರಶಸ್ತಿ ಪತ್ರ ಮತ್ತು 2023-24 ನೇ ಸಾಲಿನಲ್ಲಿ ಮಂಗಳೂರಿನಲ್ಲಿ ನಡೆದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆಯ ಸಂದರ್ಭದಲ್ಲಿ ಸಂಘಕ್ಕೆ “ಉತ್ತಮ ಸಹಕಾರ ಸಂಘ” ಎಂದು ಪ್ರಶಸ್ತಿ ಲಭಿಸಿದೆ. ತನ್ನ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿದ ಹಾಗೂ ಬ್ಯಾಂಕಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಮಂಗಳೂರು ಇವರಿಂದ 4 ಬಾರಿ ಸಾಧನಾ ಪ್ರಶಸ್ತಿ ದೊರೆತಿರುವುದು ಸಂಘದ ಕೆಲಸಕ್ಕೆ ಸಾಕ್ಷಿಯಾಗಿದೆ.

ಸಂಘವು ತನ್ನ ಸಾಮಾಜಿಕ ಕಾರ್ಯದ ಮೂಲಕ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಸರಕಾರಿ ಶಾಲೆಗಳಲ್ಲಿ 5 ರಿಂದ 10 ನೇ ತರಗತಿಗಳಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ತನ್ನ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನವನ್ನು ಮಹಾಸಭೆಯ ದಿನದಂದು ನೀಡಿಕೊಂಡು ಬರುತ್ತಿದೆ ಇಲ್ಲಿಯವರೆಗೆ ಒಟ್ಟು 21,73,000 ರೂ. ಮೊತ್ತವನ್ನು ಒಟ್ಟು 1,067 ವಿದ್ಯಾರ್ಥಿ ಗಳಿಗೆ ನೀಡಲಾಗಿದೆ. ಹಲವಾರು ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವನ್ನು ನೀಡಲಾಗಿದೆ ಎಂದರು. ಸಂಘದಲ್ಲಿ ನೆಫ್ಟ್ ಆರ್.ಟಿ.ಜಿ.ಎಸ್ ಸೌಲಭ್ಯ, ಎಸ್.ಎಂ.ಎಸ್. ಸೌಲಭ್ಯಗಳನ್ನು ಒದಗಿಸಲಾಗಿದೆ. ಸದಸ್ಯರಿಗೆ ಸೋಲಾರ್ ವಾಟರ್ ಹೀಟರ್ ಮತ್ತು ಸೋಲಾರ್ ಲೈಟ್ ಅಳವಡಿಸಲು ಶೂನ್ಯ ಬಡ್ಡಿದರದಲ್ಲಿ 2 ಲಕ್ಷ ರೂ. ಸಾಲವನ್ನು ವಿತರಿಸಲಾಗುವುದು ಎಂದರು.

ಸಂಘದ ಉಪಾಧ್ಯಕ್ಷ ಎನ್. ಸುಂದರ ರೈ ನಿರ್ದೇಶಕರಾದ ರಾಮಯ್ಯ ರೈ, ಜೈರಾಜ್ ಭಂಡಾರಿ, ಅಶ್ವಿನ್ ಎಲ್. ಶೆಟ್ಟಿ ಮತ್ತು ಮಹಾಪ್ರಬಂಧಕ ವಸಂತ ಜಾಲಾಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ?:ಮಂಗಳೂರಿನ ಕುಳಾಯಿಯಲ್ಲಿ ದಾಸನಮನ ಮತ್ತು ಭಜನಾ ಸಂಕೇತನ ಕಾರ್ಯಕ್ರಮ

www.goldfactorynews.com

Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.

Digiqole Ad

ಈ ಸುದ್ದಿಗಳನ್ನೂ ಓದಿ