ಕರಾವಳಿಯಲ್ಲಿ ಕಡಿಮೆಯಾತ್ತಿರುವ ಮಲೇರಿಯಾ ರೋಗ ಪ್ರಕರಣ
![ಕರಾವಳಿಯಲ್ಲಿ ಕಡಿಮೆಯಾತ್ತಿರುವ ಮಲೇರಿಯಾ ರೋಗ ಪ್ರಕರಣ](https://goldfactorynews.com/wp-content/uploads/2024/04/IMG-20240425-WA0026-435x560.jpg)
![Digiqole Ad](https://goldfactorynews.com/wp-content/uploads/2023/04/crust-puttur.gif)
ಕರಾವಳಿಯಲ್ಲಿ ಕಡಿಮೆಯಾತ್ತಿರುವ ಮಲೇರಿಯಾ ರೋಗ ಪ್ರಕರಣ
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2016ರಲ್ಲಿ ಸಾವಿರಕ್ಕೂ ಅಧಿಕ ಕಂಡುಬಂದಿದ್ದ ಮಲೇರಿಯಾ ಪ್ರಕರಣ 2023ರ ವೇಳೆಗೆ ಇಳಿಕೆಯಾಗಿದೆ. ಆರೋಗ್ಯ ಇಲಾಖೆ, ಸಾರ್ವಜನಿಕರ ಸಹಭಾಗಿತ್ವದಲ್ಲಿ ಇದು ಸಾಧ್ಯವಾಗಿದೆ.
ಉಡುಪಿ, ದ.ಕ.ದಲ್ಲಿ ಕೆಲವು ವರ್ಷಗಳಿಂದ ಸಾಂಕ್ರಾಮಿಕ ರೋಗ ಪತ್ತೆ ಮತ್ತು ಶೀಘ್ರ ಚಿಕಿತ್ಸೆ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ತರ ಹೆಜ್ಜೆ ಇಡುತ್ತಿದೆ. ವಿಶೇಷ ತರಬೇತಿ ಹೊಂದಿದ ಕಾರ್ಯಕರ್ತರು ಮನೆ ಮನೆಗೆ, ನಿರ್ಮಾಣ ಹಂತದ ಕಟ್ಟಡಗಳಿಗೆ ತೆರಳಿ ಸಾರ್ವಜನಿಕರು, ಕಾರ್ಮಿಕರಿಗೆ ಟೆಸ್ಟ್ ಮತ್ತು ಸಕ್ರಿಯ ರಕ್ತ ಲೇಪನ ಪರೀಕ್ಷೆ ನಡೆಸುತ್ತಿದ್ದಾರೆ. ಈ ಮೂಲಕ ಜ್ವರ ಇದ್ದವರ ತಪಾಸಣೆ, ಮಲೇರಿಯಾ ಜ್ವರ ಬಂದವರ ಕುಟುಂಬದ ಸದಸ್ಯರ ತಪಾಸಣೆ, ಸುತ್ತಮುತ್ತಲಿನ ಒಂದು ಕಿ.ಮೀ. ವ್ಯಾಪ್ತಿಯ ಸಾರ್ವಜನಿಕರನ್ನೂ ತಪಾಸಣೆ ಮಾಡಲಾಗುತ್ತದೆ. ನಿರಾಶ್ರಿತರನ್ನೂ ತಪಾಸಣೆಗೆ ಒಳಪಡಿಸಲಾಗುತ್ತದೆ.
ಹೊರ ರಾಜ್ಯದವರಾದ ಪಶ್ಚಿಮ ಬಂಗಾಲ, ಒಡಿಶಾ, ಝಾರ್ಖಂಡ್, ಉತ್ತರ ಪ್ರದೇಶ ಪ್ರದೇಶ ಸಹಿತ ಕೆಲವೊಂದು ರಾಜ್ಯಗಳಲ್ಲಿ ಮಲೇರಿಯಾ ಜಾಸ್ತಿ ಇದೆ. ಅಲ್ಲಿಂದ ಕೆಲಸಕ್ಕೆಂದು ಅವಿಭಜಿತ ದ.ಕ. ಜಿಲ್ಲೆಗೆ ಬರುವ ಕಾರ್ಮಿಕರ ಮೇಲೆ ವಿಶೇಷ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ಅವರನ್ನು ನಿರಂತರ ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಮುನ್ನೆಚ್ಚರಿಕೆ ಕ್ರಮಗಳು:-
– ಹವಾಮಾನ ಬದಲಾವಣೆ ಕಾರಣದಿಂದಾಗಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ಕಾಯಿಲೆ ಬಾರದಂತೆ ಜನರೇ ಜಾಗೃತರಾಗಬೇಕಿದೆ.
– ಮನೆಯ ಸುತ್ತ ನಿರುಪಯುಕ್ತ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ
– ಸೊಳ್ಳೆಯಿಂದ ಗರ್ಭಿಣಿಯರಂತೂ ತುಂಬಾ ಎಚ್ಚರಿಕೆ ವಹಿಸಿ
– ಮಂದ ಬಣ್ಣದ ಉಡುಪು ಧರಿಸಿ, ಸಾಮಾನ್ಯವಾಗಿ ಸೊಳ್ಳೆ ದೂರವಿರುತ್ತದೆ.
-ದಿನಂಪ್ರತಿ ಮನೆಯ ನೆಲವನ್ನು ಒರೆಸಲು ಮರೆಯದಿರಿ
– ಸಾಮಾನ್ಯ ಜ್ವರವನ್ನೂ ನಿರ್ಲಕ್ಷಿಸದೆ ಹತ್ತಿರದ ವೈದ್ಯರನ್ನು ಭೇಟಿಯಾಗಿ
– ನೀರಿನ ಸಂಗ್ರಹಕ್ಕೆ ಭದ್ರವಾದ ಮುಚ್ಚಿದ ವ್ಯವಸ್ಥೆ ಇರಬೇಕು.
![Digiqole Ad](https://goldfactorynews.com/wp-content/uploads/2023/10/goldfactory_self.gif)