• 27 ಜುಲೈ 2024

ನಾಪತ್ತೆಯಾದ ಪ್ರೀತಿಯ ನಾಯಿ, ಮರಳಿ ಬಾರದ ಚಿಂತೆಯಿಂದ ಯುವತಿ ಆತ್ಮಹತ್ಯೆ.!

 ನಾಪತ್ತೆಯಾದ ಪ್ರೀತಿಯ ನಾಯಿ, ಮರಳಿ ಬಾರದ ಚಿಂತೆಯಿಂದ ಯುವತಿ ಆತ್ಮಹತ್ಯೆ.!
Digiqole Ad

ನಾಪತ್ತೆಯಾದ ಪ್ರೀತಿಯ ನಾಯಿ, ಮರಳಿ ಬಾರದ ಚಿಂತೆಯಿಂದ ಯುವತಿ ಆತ್ಮಹತ್ಯೆ.!

ಚಂಡೀಗಢ ಏ.29: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಎಂಬ ಕಾರಣಕ್ಕೆ, ಅಪ್ಪ-ಅಮ್ಮ ಬೈದರು, ಮೊಬೈಲ್ ನೋಡಬೇಡ ಎಂದು ಹೇಳಿದರು ಎಂಬಿತ್ಯಾದಿ ಕ್ಷುಲ್ಲಕ ಕಾರಣಕ್ಕೆ ಮಕ್ಕಳು / ಹದಿಹರೆಯದವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ಬಹಳಷ್ಟು ಕೇಳಿರುತ್ತಿರಾ. ಇದೂ ಕೂಡ ಅಂತಹದ್ದೇ ಮಾದರಿಯ ಘಟನೆಯಾಗಿದೆ. ಈ ಆಘಾತಕಾರಿ ಘಟನೆಯು ಹರಿಯಾಣದಲ್ಲಿ ಸಂಭವಿಸಿದ್ದು, 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಈ ಸುದ್ದಿಯನ್ನು ಓದಿದ್ದೀರಾ.?ಸರ್ಕಾರಿ ಕಚೇರಿಯಲ್ಲಿ ಹಕ್ಕಿಗಳಿಗೆ ಕುಡಿಯಲು ನೀರಿಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್.ಎಂ.ಪಿ ಆದೇಶ

ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದುದೇ ಆಕೆಯ ಆತ್ಮಹತ್ಯೆಗೆ ಕಾರಣ ಎಂದು ಮೂಲಗಳಿಂದ ತಿಳಿದು ಬಂದಿದೆ. ಶನಿವಾರ (ಏಪ್ರಿಲ್ 27) ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರಾದರು, ಆ ವೇಳೆ ಆಕೆ ಮೃತಪಟ್ಟಿದ್ದಳು. ”ಕೆಲವು ದಿನಗಳ ಹಿಂದೆ ನಾಪತ್ತೆಯಾದ ತನ್ನ ನೆಚ್ಚಿನ ಶ್ವಾನ ಇನ್ನೂ ಪತ್ತೆಯಾಗದ ಕೊರಗಿನಿಂದ 12 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾಳೆ. ಕೆಲವು ದಿನಗಳಿಂದ ಆಕೆ ಈ ವಿಚಾರದಲ್ಲಿ ಕೊರಗುತ್ತಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ.?ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದು  ಮಲೆ ಮಹದೇಶ್ವರ ಸ್ವಾಮಿಗೆ ಬೆಳ್ಳಿ ಕಾಣಿಕೆ 

ಘಟನೆಯ ವಿವರ.

”ಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಬಾಲಕಿಯ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತು” ಎಂದು ಮನೆಯವರು ಹೇಳಿದ್ದಾರೆ. “ಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದು, ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲ” ಎಂದು ಅವರು ಹೇಳಿಕೊಂಡಿದ್ದಾರೆ. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ, ನಾಯಿಮರಿಯನ್ನು ಕಳೆದುಕೊಂಡ ವಿದ್ಯಾರ್ಥಿನಿಯ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ಹೇಳಿವೆ.

ಈ ಸುದ್ದಿಯನ್ನು ಓದಿದ್ದೀರಾ.?ಚುನಾವಣೆ ದಿನವೇ ಗಡಿ ಭದ್ರತಾ ಪಡೆಯ ಭರ್ಜರಿ ಕಾರ್ಯಾಚರಣೆ, ಇಬ್ಬರು ಭಯೋತ್ಪಾದಕರ ಹತ್ಯೆ.

ಶನಿವಾರ ಸಂಜೆ ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದ ಸಂದರ್ಭ, ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ಕಡು ನಿರ್ಧಾರ ಕೈಗೊಂಡಿದ್ದು. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾಳೆ. ಕೊನೆಯ ದಿನಗಳಲ್ಲಿ ಮಗಳ ದಿನಗಳನ್ನು ನೆನೆದು ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ”ಮೂರು ತಿಂಗಳಿಂದ ಆಕೆ ಮತ್ತು ಶ್ವಾನದ ಮಧ್ಯೆ ಅತ್ಯುತ್ತಮ ಬಾಂಧವ್ಯ ರೂಪುಗೊಂಡಿತ್ತು. ನಾಯಿ ಮರಿ ನಾಪತ್ತೆಯಾದಾಗಿನಿಂದ ಆಕೆ 5 ದಿನಗಳಿಂದ ಆಹಾರ ಸೇವಿಸುವುದನ್ನೇ ನಿಲ್ಲಿಸಿದ್ದಳು. ನಿನ್ನೆ ನಾನು ತರಕಾರಿ ಖರೀದಿಗಾಗಿ ಹೊರ ಹೋಗಿದ್ದೆ. ಈ ವೇಳೆ ನಮ್ಮ ನೆರೆಯವರು ಕರೆ ಮಾಡಿ ಕೂಡಲೇ ಆಗಮಿಸುವಂತೆ ಹೇಳಿದ್ದಾರೆ. ಕೂಡಲೇ ಮನೆಗೆ ಧಾವಿಸಿ ಬಂದಿದ್ದೆ. ಈ ವೇಳೆ ಆಕೆ ಮೃತಪಟ್ಟಿದ್ದಳು” ಎಂದು ಬಾಲಕಿ ತಾಯಿ ನೋವಿನಿಂದ ತಿಳಿಸಿದ್ದಾರೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ