• 8 ಸೆಪ್ಟೆಂಬರ್ 2024

ಮಡಿಕೇರಿ: ಸ್ವೀಟ್ ಗಾಗಿ ಸ್ವೀಟಿಯನ್ನೇ ಕಳೆದುಕೊಂಡ ಮದುಮಗ.!

 ಮಡಿಕೇರಿ: ಸ್ವೀಟ್ ಗಾಗಿ ಸ್ವೀಟಿಯನ್ನೇ ಕಳೆದುಕೊಂಡ ಮದುಮಗ.!
Digiqole Ad

ಮಡಿಕೇರಿ: ಸ್ವೀಟ್ ಗಾಗಿ ಸ್ವೀಟಿಯನ್ನೇ ಕಳೆದುಕೊಂಡ ಮದುಮಗ.!

ಮಡಿಕೇರಿ ಮೇ.06: ಮದುವೆ ಹಿಂದಿನ ದಿನ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆ ವರದಿಯಾಗಿದೆ. ಹಾನಗಲ್ಲು ಗ್ರಾಮದ ಸಿದ್ದಾರ್ಥ ಬಡಾವಣೆಯ ಯುವತಿಯ ವಿವಾಹ ತುಮಕೂರು ಜಿಲ್ಲೆಯ ಯುವಕನೋರ್ವನೊಂದಿಗೆ ನಿಶ್ಚಯವಾಗಿದ್ದು, ಮೇ 5ರಂದು ಮಡಿಕೇರಿಯ ಜಾನಕಿ ಕನ್ವೆನ್ಷನ್ ಹಾಲ್‌ನಲ್ಲಿ ವಿವಾಹ ಸಮಾರಂಭ ಏರ್ಪಡಿಸಿದ್ದರು.

ಈ ಸುದ್ದಿಯನ್ನು ಓದಿದ್ದೀರಾ.?ದಕ್ಷಿಣ ಕನ್ನಡ ಜಿಲ್ಲೆಯ 30 ಕಡೆಗಳಲ್ಲಿ ಸಿಸಿ ಕೆಮರಾ ಅಳವಡಿಕೆ

ಶನಿವಾರ ಸಂಜೆ ತುಮಕೂರಿನಿಂದ ವರನ ಕಡೆಯವರು ಮಂಟಪಕ್ಕೆ ಆಗಮಿಸಿದ್ದು, ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ ತೆಗೆದು ಗಲಾಟೆ ಆರಂಭಿಸಿದ್ದಾರೆ. ಮಂಟಪದಲ್ಲಿಯೇ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆದಿದೆ ಎನ್ನಲಾಗಿದೆ. ರವಿವಾರ ಬೆಳಗ್ಗೆ ಅಂತಿಮವಾಗಿ ಪ್ರಕರಣ ಪೊಲೀಸ್‌ ಠಾಣೆಗೆ ತಲುಪಿದೆ. ಶನಿವಾರ ರಾತ್ರಿ ಮದುವೆಯೇ ಬೇಡ ಎಂದು ಉಂಗುರ ಕಳಚಿಕೊಟ್ಟಿದ್ದ ವರ, ರವಿವಾರ ಬೆಳಗ್ಗೆ ನಾನು ಮದುವೆಯಾಗುತ್ತೇನೆ ಎಂದು ಹೊಸ ವರಸೆ ಆರಂಭಿಸಿದ್ದ ಎನ್ನಲಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ.?ಫಾರಂ ಕೋಳಿ ತೂಕದಲ್ಲಿ‌ ಮೋಸ; ವಂಚಕರನ್ನು ಮರಕ್ಕೆ ಕಟ್ಟಿಹಾಕಿದ ರೈತ

ಆದರೆ ದಿಢೀ‌ರ್ ಘಟನಾವಳಿಯಿಂದ ಬೇಸತ್ತ ವಧು ಮದುವೆಯೇ ಬೇಡ ಎಂದು ಪೊಲೀಸರೆದುರು ಹೇಳಿಕೆ ನೀಡಿದ್ದಾಳೆ. ಮದುವೆಗೆಂದು ಖರ್ಚು ಮಾಡಿರುವ ಹಣವನ್ನು ವರನ ಕಡೆಯವರು ನೀಡಬೇಕೆಂದು ವಧುವಿನ ಕಡೆಯವರು ಠಾಣೆ ಎದುರು ಆಗ್ರಹಿಸಿದ್ದಾರೆ. ಅಂತಿಮವಾಗಿ ಹಣಕಾಸಿನ ವಿಚಾರವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಪೊಲೀಸರು ಸಲಹೆ ನೀಡಿ ಈ ಪ್ರಕರಣಕ್ಕೆ ಇತಿಶ್ರೀ ಹಾಡಿದ್ದಾರೆ ಎನ್ನಲಾಗಿದೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ