• 8 ಸೆಪ್ಟೆಂಬರ್ 2024

ಬೆಂಕಿ ನಂದಿಸಲು ಧಾವಿಸಿ ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

 ಬೆಂಕಿ ನಂದಿಸಲು ಧಾವಿಸಿ ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!
Digiqole Ad

ಬೆಂಕಿ ನಂದಿಸಲು ಧಾವಿಸಿ ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

ಉಡುಪಿ: ನಗರದ ಆದಿ ಉಡುಪಿ ಬಳಿಯ ಹೋಟೆಲ್ಲೊಂದಕ್ಕೆ ಹತ್ತಿಕೊಂಡ ಬೆಂಕಿಯನ್ನು ನಂದಿಸಲು ಧಾವಿಸಿ ಬಂದ ಅಗ್ನಿಶಾಮಕ ದಳದ ವಾಹನದಲ್ಲಿ ನೀರಿಲ್ಲದೆ ಕಟ್ಟಡ ಸಂಪೂರ್ಣ ಸುಟ್ಟು ಹೋದ ಘಟನೆ ಸಂಭವಿಸಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಬ್ರಹ್ಮಗಿರಿಯಲ್ಲಿರುವ ಅಗ್ನಿಶಾಮಕ ದಳಕ್ಕೆ ಸ್ಥಳೀಯರೂ ಮಾಹಿತಿ ನೀಡಲಾಗಿತ್ತು.

ಆದರೆ,ಅರ್ಧಗಂಟೆಯ ಬಳಿಕ ಬಂದ ವಾಹನ ಮತ್ತು ಸಿಬ್ಬಂದಿ ಕಾರ್ಯಾಚರಣೆಗೆ ತಯಾರಿ ನಡೆಸುವಾಗ ವಾಹನದಲ್ಲಿ ನೀರಿಲ್ಲ ಎಂಬುದು ಗೊತ್ತಾಗಿದೆ. ತತ್ ಕ್ಷಣ ನೀರು ತುಂಬಿಸಿಕೊಂಡು ಬರುತ್ತೇವೆ ಎಂದು ಮಲ್ಪೆಯತ್ತ ತೆರಳಿದ ವಾಹನ ವಾಪಾಸ್ ಬರಲೇ ಇಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಷ್ಟರಲ್ಲಿ ಮಳೆ ಬಂದಿದ್ದರಿಂದ ಮಳೆ ನೀರು ಮತ್ತು ರಸ್ತೆ ಬದಿಯ ಹೊಂಡದಲ್ಲಿ ಸಂಗ್ರಹವಾಗಿದ್ದ ನೀರನ್ನೇ ಬಳಸಿಕೊಂಡು ಸ್ಥಳದಲ್ಲಿ ಉಳಿದಿದ್ದ ದಳದ ಕೆಲವು ಸಿಬ್ಬಂದಿ ಬೆಂಕಿಯನ್ನು ನಂದಿಸ್ಸಿದ್ದಾರೆ. ಆದರೆ ಅಷ್ಟರಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ: ಹೆತ್ತ ತಾಯಿಯಷ್ಟೇ ಶ್ರೇಷ್ಠ ಕಲ್ಲುರ್ಟಿ ದೈವ!

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ