• 8 ಸೆಪ್ಟೆಂಬರ್ 2024

ಶಾಸಕ ಹರೀಶ್ ಪೂಂಜ ವಿರುದ್ಧ ಎಫ್‌ಐಆ‌ರ್ ದಾಖಲು!

 ಶಾಸಕ ಹರೀಶ್ ಪೂಂಜ ವಿರುದ್ಧ ಎಫ್‌ಐಆ‌ರ್ ದಾಖಲು!
Digiqole Ad

ಶಾಸಕ ಹರೀಶ್ ಪೂಂಜ ವಿರುದ್ಧ ಎಫ್‌ಐಆ‌ರ್ ದಾಖಲು!

ಬೆಳ್ತಂಗಡಿ : ತನ್ನ ಬೆಂಬಲಿಗರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದಲ್ಲದೆ, ಠಾಣೆ ಏನು ನಿಮ್ಮ ಅಪ್ಪಂದಾ ಎಂದು ಪೊಲೀಸರಿಗೇ ಧಮ್ಕಿ ಹಾಕಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜರವರ ಮೇಲೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಘಟನೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಪ್ರದೇಶದ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಪೊಲೀಸರು ದಾಳಿ ನಡೆಸಿ, ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಸ್ಥಳದಿಂದ ಅಕ್ರಮ ಗಣಿಗಾರಿಕೆಯಿಂದ ತೆಗೆದಿರುವ ಕಲ್ಲುಗಳ ರಾಶಿ, ಒಂದು ಹಿಟಾಚಿ ವಾಹನ, ಒಂದು ಟ್ರಾಕ್ಟರ್, ಕಲ್ಲು ಸ್ಫೋಟಕ್ಕೆ ಬಳಸುವ 4 ಸಜೀವ ಮದ್ದುಗುಂಡು, ಬಳಕೆಯಾಗಿರುವ 4 ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿತ್ತು.

ಪ್ರಕರಣ ಸಂಬಂಧ ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಹಾಗೂ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಪ್ರಮೋದ್ ಎಂಬುವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.

ಹೀಗಾಗಿ,  ಅಕ್ರಮ ಕಲ್ಲಿನ ಕೊರೆ ನಡೆಸುತ್ತಿರುವ ಆರೋಪದ ಮೇಲೆ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿಯ ಬಂಧನವನ್ನು ಖಂಡಿಸಿ, ಯುವ ಮೋರ್ಚಾ ಕಾರ್ಯಕರ್ತರು ಶನಿವಾರ ತಡರಾತ್ರಿ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ್ದರು.ಈ ವೇಳೆ ಸ್ಥಳಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜಾ ಅವರು ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಸಮೇತ ಪೊಲೀಸರಿಗೆ ಅವಾಜ್ ಹಾಕಿದ್ದಾರೆ. ಬಳಿಕ ಅವರು ಕೂಡಾ ಠಾಣೆಯ ಎದುರು ಧರಣಿ ಕುಳಿತು ಶಶಿರಾಜ್ ಶೆಟ್ಟಿ ಬಂಧಿಸಿದ ಪೊಲೀಸರ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನುವ ವಿಡಿಯೋ ವೈರಲ್ ಆಗಿದೆ.

ಶಾಸಕರ ವಿರುದ್ಧ ಎಫ್ಐಆರ್ ದಾಖಲು: ”ಬೆದರಿಕೆ ಹಾಕಿದ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣವನ್ನು ದಾಖಲಾಗಿದೆ” ಎಂದು ದಕ್ಷಿಣ ಕನ್ನಡದ ಎಸ್ಪಿ ಸಿ.ಬಿ ರಿಷ್ಯಂತ್ ಅವರು ತಿಳಿಸಿದ್ದಾರೆ.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಹರೀಶ್ ಪೂಂಜಾ, ಈ ಪ್ರಕರಣದಲ್ಲಿ ಭಾಗಿಯಾಗದ ಬಿಜೆಪಿ ಕಾರ್ಯಕರ್ತ ಶಶಿರಾಜ್ ಅವರನ್ನು ಬಂಧಿಸಿರುವುದು ಖಂಡನೀಯ. ಬೆಳ್ತಂಗಡಿ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಒಬ್ಬ ಅಮಾಯಕ ಬಿಜೆಪಿ ಕಾರ್ಯಕರ್ತನಿಗೆ ಅನ್ಯಾಯವಾಗುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದ್ದು, ಈ ಮೂಲಕ ಸುಳ್ಳು ಕೇಸ್ ದಾಖಲಿಸಿ ಕಾರ್ಯಕರ್ತರನ್ನು ಬಂಧಿಸಿ ಅವರನ್ನು ಧಮನಿಸುವ ಕೆಲಸ ನಡೆಯುತ್ತಿದೆ ಎಂದು ದೂರಿದರು.

ಈ ಸುದ್ಧಿ ಓದಿದ್ದೀರಾ: ಶನಿ ದೇವನಿಗೆ ಪ್ರದಕ್ಷಿಣೆ ಹಾಕಿದ ಬೆಕ್ಕು!

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ