• 27 ಜುಲೈ 2024

ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಸರಸ್ವತಿ ಎಂ ಅವರಿಗೆ ಅಭಿನಂದನಾ ಕಾರ್ಯಕ್ರಮ.

 ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಸರಸ್ವತಿ ಎಂ ಅವರಿಗೆ ಅಭಿನಂದನಾ ಕಾರ್ಯಕ್ರಮ.
Digiqole Ad

ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಸರಸ್ವತಿ ಎಂ ಅವರಿಗೆ ಅಭಿನಂದನಾ ಕಾರ್ಯಕ್ರಮ.

ಕಾಣಿಯೂರು: 2023 -24ನೇ ಶೈಕ್ಷಣಿಕ ವರ್ಷದ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ ಎಲ್ಲ ಸಾಧಕ ವಿದ್ಯಾರ್ಥಿಗಳಿಗೆ ಮತ್ತು ಸಂಸ್ಥೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಹೊಂದುತ್ತಿರುವ ಶ್ರೀಮತಿ ಸರಸ್ವತಿ ಎಂ ಇವರಿಗೆ ಗೌರವ ಪೂರ್ವಕ ಅಭಿನಂದನೆಯನ್ನು ಸಂಸ್ಥೆಯ ವತಿಯಿಂದ ಸಲ್ಲಿಸಲಾಯಿತು.

ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು ಉದ್ಘಾಟಿಸಿ ಸಾಧಕ ವಿದ್ಯಾರ್ಥಿಗಳು ಮುಂದೆ ಉತ್ತಮ ವಿದ್ಯಾಭ್ಯಾಸ ಪಡೆದು ಸತ್ಪ್ರಜೆಯಾಗಿ ಬಾಳಿದರೆ ಸಂಸ್ಥೆಯ, ಗುರುವೃಂದದವರ ,ಹೆತ್ತವರ ಪ್ರಯತ್ನ ಸಾರ್ಥಕವಾಗುತ್ತದೆ. ಎಂದರಲ್ಲದೆ ಸಂಸ್ಥೆಯಿಂದ ನಿವೃತ್ತರಾಗುತ್ತಿರುವ ಮುಖ್ಯಗುರು ಸರಸ್ವತಿ ಎಂ ರವರ ನಿಸ್ವಾರ್ಥ, ಕ್ರಿಯಾಶೀಲ ಸೇವೆಯನ್ನು ಕೊಂಡಾಡಿದರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಮಾತನಾಡುತ್ತಾ ಸಂಸ್ಥೆಯ ಪ್ರಗತಿಯ ಪಥದಲ್ಲಿ ಮುಖ್ಯಗುರು ಸರಸ್ವತಿಯವರ ಪಾತ್ರ ಹಿರಿದು.ಮುಂದೆಯೂ ಅವರ ಸೂಕ್ತ ಸಲಹೆಗಳು ನಮಗೆ ಅತಿ ಮುಖ್ಯ ಎಂದರು .ಸಾಧಕ ವಿದ್ಯಾರ್ಥಿ ಗಳನ್ನು ಕೂಡ ಅಭಿನಂದಿಸಿ ಪ್ರೋತ್ಸಾಹಿಸಿದರು. ಮುಖ್ಯ ಅತಿಥಿಗಳಾದ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಚಂದ್ರಹಾಸ ರೈ ಅಗಲ್ಪಾಡಿ, ಗಿರಿಶಂಕರ್ ಸುಲಾಯ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಉಮೇಶ್ ಕೆ ಎಂ ಬಿ ,ಮುಖ್ಯಗುರು ನಾರಾಯಣ ಭಟ್, ಪೋಷಕ ಬಂಧು ಶ್ರೀ ಧನಂಜಯ ಕೇನಾಜೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದಲೂ ಎಸ್ ಎಸ್ ಎಲ್ ಸಿ ಯಲ್ಲಿ ಗರಿಷ್ಠ ಅಂಕಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಮತ್ತು ಅದಕ್ಕೆ ಸಹಕರಿಸಿದ ಎಸ್ ಎಸ್ ಎಲ್ ಸಿ ಶಿಕ್ಷಕ ವೃಂದದವರನ್ನು ಮತ್ತು ನಿವೃತ್ತ ಮುಖ್ಯ ಗುರು ಸರಸ್ವತಿ ಯಂ ಅವರನ್ನು ಸಂಘದ ಅಧ್ಯಕ್ಷರಾದ ದೀಕ್ಷಿತ್ ಬಂಡಾಜೆ ಮತ್ತು ಶ್ರವಣ್ ಸಾಮಾನಿ ಅಭಿನಂದಿಸಿದರು.

ಈ ಸುದ್ದಿಯನ್ನು ಓದಿದ್ದೀರಾ.?“ಗುರುವಂದನ” – “ಸ್ನೇಹ ಸಮ್ಮಿಲನ” ಕಾರ್ಯಕ್ರಮ.  “ಆದರ್ಶ ವಿದ್ಯಾರ್ಥಿಗಳೇ ಶಿಕ್ಷಕರ ಸಂಪತ್ತು” – ಸುಂದರ್ ಸೇರ್ವೆಗಾರ್.

2023-24ನೇ ಶೈಕ್ಷಣಿಕ ವರ್ಷದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಚಿನ್ನದ ಉಂಗುರವನ್ನು ಕೊಡುವ ಮೂಲಕ ಮುಖ್ಯ ಗುರುಗಳನ್ನು ಅಭಿನಂದಿಸಿದರು. ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷೆ ಜ್ಞಾನೇಶ್ವರಿ, ಶಾಲಾಡಳಿತ ಮಂಡಳಿಯ ಟ್ರಸ್ಟಿಗಳಾದ ದೇವಿಕಿರಣ್ ರೈ ಮಾದೋಡಿ, ಹರಿಚರಣ್ ರೈ ಮಾದೋಡಿ, ಹಿರಿಯ ಶಿಕ್ಷಕಿ ಸವಿತಾ ಕೆ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಮಾನ್ವಿ ಜಿ ಎಸ್, ರಾಶಿ ಕೆ ಸಿ, ಗ್ರೀಷ್ಮ ರೈ, ಅನುಶ್ರೀ ಎ ಎಂ, ಮೃಣಾಲಿ ಎಂ ಪ್ರಾರ್ಥಿಸಿದರು. ಶಾಲಾ ಆಡಳಿತ ಅಧಿಕಾರಿ ಶ್ರೀ ವಸಂತ ರೈ ಕಾರ್ಕಳ ಪ್ರಾಸ್ತಾವಿಕ ಮಾತಿನೊಂದಿಗೆ ಸರ್ವರನ್ನು ಸ್ವಾಗತಿಸಿದರು. ಕನ್ನಡ ಮಾಧ್ಯಮದ ಮುಖ್ಯಗುರು ಶ್ರೀಮತಿ ವಿನಯ ವಿ ಶೆಟ್ಟಿ ಮತ್ತು ಪುಷ್ಪ ಬಿ ಜೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತ ಜೆ ರೈ ರವರು ನಿವೃತ್ತ ಮುಖ್ಯ ಗುರುಗಳ ಅಭಿನಂದನಾ ಪತ್ರವನ್ನು ವಾಚಿಸಿದರು. ಸಹ ಆಡಳಿತ ಅಧಿಕಾರಿ ಹೇಮಾನಾಗೇಶ್ ರೈ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿಯರಾದ ಕವಿತ ವಿ ರೈ ಮತ್ತು ಧನ್ಯ ಎಂ ಕೆ ನಿರೂಪಿಸಿದರು.

ಈ ಸುದ್ದಿಯನ್ನು ಓದಿದ್ದೀರಾ.?ಮಹಾರಾಷ್ಟ್ರದಲ್ಲೂ  ಕಂಪಿಸಿದ ಗಂಡು ಕಲೆ – ಕರಾವಳಿಯ ಯಕ್ಷಗಾನ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ