ಕಾಣಿಯೂರು ಶಾಲೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
![ಕಾಣಿಯೂರು ಶಾಲೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ](https://goldfactorynews.com/wp-content/uploads/2024/06/IMG-20240601-WA0039-850x469.jpg)
![Digiqole Ad](https://goldfactorynews.com/wp-content/uploads/2023/04/crust-puttur.gif)
ಕಾಣಿಯೂರು ಶಾಲೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರಿನಲ್ಲಿ ಮಕ್ಕಳಿಗೆ ಸರಕಾರದಿಂದ ಉಚಿತವಾಗಿ ನೀಡುವ ಪುಸ್ತಕ ಮತ್ತು ಸಮವಸ್ತ್ರವನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪರಮೇಶ್ವರ ಅನಿಲ ವಿತರಿಸಿ ಸರಕಾರದಿಂದ ನೀಡುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು..ಈ ಸಂದರ್ಭದಲ್ಲಿ ಯಶೋದಾ ನೇರೋಳ್ತಡ್ಕ, ಕಾಣಿಯೂರು ಕ್ಲಸ್ಟರ್ ಸಿಆರ್ ಪಿ ಯಶೋದಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಮಾಜಿ ಅಧ್ಯಕ್ಷ ರಾಮಣ್ಣ ಗೌಡ ಮುಗರಂಜ, ಕೋಶಾಧಿಕಾರಿ ರಾಜೇಶ್ ಮೀಜೆ, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರಾದ ಧರ್ಮೇಂದ್ರ ಗೌಡ ಕಟ್ಟತ್ತಾರು, ಬಾಲಕೃಷ್ಣ ಕರಂದ್ಲಾಜೆ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ಶಿಕ್ಷಕರಾದ ಮೋಹಿನಿ, ಭಾರತಿ, ದೇವಕಿ,ವೀಕ್ಷಿತಾ,ಶಿರಿನ ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಪುಂಡಲೀಕ ಪೂಜಾರ ಸ್ವಾಗತಿಸಿ, ಶಿಕ್ಷಕಿ ಸುಜಯ ವಂದಿಸಿದರು.
![Digiqole Ad](https://goldfactorynews.com/wp-content/uploads/2023/10/goldfactory_self.gif)