ಪ್ರಾಣಿಬಲಿ ಕೊಟ್ಟು ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು!
ಪ್ರಾಣಿಬಲಿ ಕೊಟ್ಟು ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು – ಹೀನ ನಡೆಗೆ ವ್ಯಾಪಕ ಆಕ್ರೋಶ
ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹೀನಾಯ ಸೋಲು ಕಂಡಿದ್ದಾರೆ. ಇವರ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ರೋಚಕ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತವಾಗುತ್ತಲೇ ಕಾಂಗ್ರೆಸ್ ಕಾರ್ಯಕರ್ತರು ನಡುಬೀದಿಯಲ್ಲಿ ಮೇಕೆ ಬಲಿ ಕೊಟ್ಟು ಸಂಭ್ರಮಿಸಿದ್ದಾರೆ.
ಹಾಸನ ನಗರದ ರಾಜಾರಾವ್ ವೃತ್ತದಲ್ಲಿ ಮೊದಲು ಪೂಜೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು ನಂತರ ಮೇಕೆಯನ್ನು ಬಲಿ ಕೊಟ್ಟು ಸಂಭ್ರಮಿಸಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರ ಈ ನಡೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.