• 27 ಜುಲೈ 2024

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ.

 ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ.
Digiqole Ad

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ.

ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5 ರಂದು ವಿವಿಧ ರೀತಿಯ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಗತಿ ವಿದ್ಯಾ ಸಂಸ್ಥೆಯ ಸಂಚಾಲಕರಾದ ಶ್ರೀ ಜಯಸೂರ್ಯ ರೈ ಮಾದೋಡಿಯವರು ಸಸಿಯನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರಲ್ಲದೆ, ವಿಶ್ವ ಪರಿಸರ ದಿನಾಚರಣೆಯ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡದೆ ಸಂರಕ್ಷಿಸುವುದು ಎಂದು ಹೇಳಿದರು. ವಿದ್ಯಾರ್ಥಿಗಳು ವಿವಿಧ ರೀತಿಯ ತರಕಾರಿ ಬೀಜಗಳನ್ನು ತಂದು ಸಸಿ ನೆಡುವಲ್ಲಿ ಮತ್ತು ಬೀಜ ಬಿತ್ತನೆ ಮಾಡುವಲ್ಲಿ ಹಾಗೂ ಪರಿಸರ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಟ್ರಸ್ಟಿ ಶ್ರೀ ದೇವಿಕಿರಣ್ ರೈ ಮಾದೋಡಿ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಸಹ ಆಡಳಿತಾಧಿಕಾರಿ ಹೇಮನಾಗೇಶ್ ರೈ, ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್, ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ, ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ ರೈ, ಹಿರಿಯ ಶಿಕ್ಷಕಿ ಸವಿತ ಕೆ ಮತ್ತು ಎಲ್ಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಶಿಕ್ಷಕಿಯರಾದ ಚಿತ್ರಕಲಾ ಟಿ, ಭುವನೇಶ್ವರಿ ಬಿ, ವಿಮಲಾ ಸಿ ಎಚ್, ಭವಾನಿ ಸಿ ಇವರು ಕಾರ್ಯಕ್ರಮವನ್ನು ಸಂಘಟಿಸಿದರು.

ಈ ಸುದ್ದಿಯನ್ನು ಓದಿದ್ದೀರಾ.?ರಷ್ಯಾ ಉಕ್ರೇನ್ ಯುದ್ಧದಲ್ಲಿ ಸಿಲುಕಿದ್ದ ಕೇರಳದ ಯುವಕರಿಬ್ಬರು ಶೀಘ್ರ ತಾಯ್ನಾಡಿಗೆ. 

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ