• 8 ಸೆಪ್ಟೆಂಬರ್ 2024

ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಸುವರ್ಣ ಮಹೋತ್ಸವ ಪ್ರಯುಕ್ತ ವನಮಹೋತ್ಸವ,ಸಸಿ ವಿತರಣೆ. 

 ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಸುವರ್ಣ ಮಹೋತ್ಸವ ಪ್ರಯುಕ್ತ ವನಮಹೋತ್ಸವ,ಸಸಿ ವಿತರಣೆ. 
Digiqole Ad

ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಸುವರ್ಣ ಮಹೋತ್ಸವ ಪ್ರಯುಕ್ತ ವನಮಹೋತ್ಸವ,ಸಸಿ ವಿತರಣೆ. 

ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ (ರಿ) ಕಾಣಿಯೂರು ಮತ್ತು ಸುವರ್ಣ ಮಹೋತ್ಸವ ಸಮಿತಿ -2024 ಹಾಗೂ ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣ ಕಾರ್ಯಕ್ರಮ ಕಾಣಿಯೂರು ಜಾತ್ರಾ ಗದ್ದೆಯಲ್ಲಿ ನಡೆಯಿತು.ಭಜಾನ ಮಂಡಳಿಯ ಹಿರಿಯ ಸದಸ್ಯರಾದ ಜಿನ್ನಪ್ಪ ಗೌಡರವರು ಗಿಡವನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ಪುಟ್ಟಣ್ಣ ಗೌಡ ಮುಗರಂಜ, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಪದ್ಮಯ್ಯ ಗೌಡ ಅನಿಲ, ಉಪಾಧ್ಯಕ್ಷರಾದ ಬಾಲಚಂದ್ರ ಅಬೀರ,ಕಾರ್ಯದರ್ಶಿ ಜಯಂತ ಅಬೀರ, ಕೋಶಾಧಿಕಾರಿ ಕೀರ್ತಿ ಕುಮಾರ್ ಎಳುವೆ, ಜತೆ ಕಾರ್ಯದರ್ಶಿ ವಿನಯ್ ಎಳುವೆ, ಭಜನಾ ಸಂಘಟಕರಾದ ಪರಮೇಶ್ವರ ಅನಿಲ, ಹರೀಶ್ ಮುಗರಂಜ, ಯುವಕ ಮಂಡಲದ ಗೌರವಾಧ್ಯಕ್ಷರಾದ ಸುರೇಶ್ ಓಡಬಾಯಿ, ಅಧ್ಯಕ್ಷರಾದ ರಾಜೇಶ್ ಮೀಜೆ, ಯುವಕ ಮಂಡಲದ ಉಪಾಧ್ಯಕ್ಷರಾದ ಧರ್ಮಪಾಲ ಕಲ್ಪಡ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ವಿಶ್ವನಾಥ ಓಡಬಾಯಿ, ಕಾರ್ಯದರ್ಶಿ ರವೀಂದ್ರ ಅನಿಲ, ಅಯ್ಯಪ್ಪ ಸೇವಾ ಸಮಿತಿ ಅಧ್ಯಕ್ಷರಾದ ಕೃಷ್ಣ ಚೆಟ್ಟಿಯಾರ್, ಲಕ್ಷ್ಮೀ ಪ್ರಿಯ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಮೀಳಾ ಅಜಿರಂಗಳ, ನಳಿನಿ ಕಟ್ಟತ್ತಾರು ಭಜನಾ ಮಂಡಳಿಯ ಸದಸ್ಯರಾದ ಬಾಲಕೃಷ್ಣ ಬಸ್ತಿ, ರಮೇಶ್ ಮಾದೋಡಿ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಓದಿದ್ದೀರಾ.?ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು ವಿಶ್ವಯೋಗ ದಿನಾಚರಣೆ.

Digiqole Ad

ಈ ಸುದ್ದಿಗಳನ್ನೂ ಓದಿ