• 25 ಜನವರಿ 2025

ರಾಜ್ಯಾದ್ಯಂತ ಆ.6ರ ವರೆಗೆ ಭಾರಿ ಮಳೆ ಸಂಭವ.? ಕೆಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ.!

 ರಾಜ್ಯಾದ್ಯಂತ ಆ.6ರ ವರೆಗೆ ಭಾರಿ ಮಳೆ ಸಂಭವ.? ಕೆಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ.!
Digiqole Ad

ರಾಜ್ಯಾದ್ಯಂತ ಆ.6ರ ವರೆಗೆ ಭಾರಿ ಮಳೆ ಸಂಭವ.? ಕೆಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ.!

ಬೆಂಗಳೂರು ಆ.03: ಕೆಲ ದಿನಗಳಿಂದ ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖ ವರದಿಯಂತೆ ಮತ್ತೆ ಆಗಸ್ಟ್‌ 6ರವರೆಗೆ ರಾಜ್ಯಾಧ್ಯಂತ ಭಾರೀ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಈ ಕುರಿತು ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆಯಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 6ರವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಿದ ಹವಾಮಾನ ಇಲಾಖೆಯು, ಬೆಳಗಾವಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಉದ್ದಕ್ಕೂ ಬಿರುಗಾಳಿಯ ಸಂಭವವಿದ್ದು. ಮೀನುಗಾರರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದೆ.

ಈ ಸುದ್ಧಿಯನ್ನು ಓದಿದ್ದೀರಾ.?ವಯನಾಡು ದುರಂತ: ಪುಟ್ಟ ಬಾಲಕಿ ತನ್ನ ಕಿವಿಯೋಲೆಯನ್ನೇ ದಾನ ಮಾಡಿದಳು

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಆಗಸ್ಟ್.6ರವರೆಗೂ ಭಾರಿ ಮಳೆ ಮುಂದುವರಿಯಲಿದ್ದು, ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯು ಮಾಹಿತಿ ಹಂಚಿದೆ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ