ಪುತ್ತೂರು: ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಸಿಬ್ಬಂದಿಯಿಂದಲೇ ಹಲ್ಲೆ – ಕಠಿಣ ಕ್ರಮ ಕೈಗೊಳ್ಳುವಂತೆ ಚಾಲಕರಿಂದ ಎಚ್ಚರಿಕೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಸಿಬ್ಬಂದಿಯಿಂದಲೇ ಹಲ್ಲೆ – ಕಠಿಣ ಕ್ರಮ ಕೈಗೊಳ್ಳುವಂತೆ ಚಾಲಕರಿಂದ ಎಚ್ಚರಿಕೆ.
ಸವಣೂರು: ಬಸ್ ನಿಲ್ದಾಣದ ಬಳಿ ಬಸ್ಸು ನಿಲ್ಲಿಸಿಲ್ಲವೆಂದು ಬಸ್ ಚಾಲಕನಿಗೆ ಕೆಎಸ್ಆರ್ಟಿಸಿ ಸಿಬ್ಬಂದಿಯೇ ಹಲ್ಲೆ ನಡೆಸಿದ ಘಟನೆ ನಿನ್ನೆ ಬೆಳಗ್ಗೆ ಕಡಬ ತಾಲೂಕಿನ ಸವಣೂರಿನಲ್ಲಿ ನಡೆದಿದೆ. ಬಸ್ ಚಾಲಕ ಕೆಲವು ಮೀಟರ್ ದೂರದಲ್ಲಿ ನಿಲ್ಲಿಸಿದ್ದು, ಈ ವೇಳೆ ಬಸ್ಸಿಗೆ ಹತ್ತಿದ ಬಸ್ ಸಿಬ್ಬಂದಿ ನಾರಾಯಣ ಅವರು ಚಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಸ್ಸಿನಲ್ಲಿದ್ದ ಸಹ ಪ್ರಯಾಣಿಕರು ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಹಲ್ಲೆಗೊಳಗಾದ ಚಾಲಕ ಹೀರೆಬಂಡಾಡಿ ನಿವಾಸಿ ಭರತ್ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದು, ಬೆಳ್ಳಾರೆ ಪೊಲೀಸರು ತನಿಖೆ ಮುಂದುವರಿಸುತ್ತಿದ್ದಾರೆ.
ಈ ಹಲ್ಲೆಯ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಬಸ್ ಸಂಚಾರ ಸ್ಥಗಿತ ಗೊಳಿಸುವ ಬಗ್ಗೆ ಕೆಎಸ್ಆರ್ಟಿಸಿ ಬಸ್ ಚಾಲಕರು ಎಚ್ಚರಿಕೆ ನೀಡಿದ್ದಾರೆ. ಕಠಿಣ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಬಸ್ ಚಾಲಕರು, ನಿರ್ವಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.