ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.
ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.
ಕಡಬ: ತಾಲೂಕು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯ ವ್ಯಾಪ್ತಿಗೊಳಪಟ್ಟ ಸವಣೂರು, ಪುಣ್ಚಪ್ಪಾಡಿ, ಕುದ್ಮಾರು, ಬೆಳಂದೂರು ಮತ್ತು ಕಾಯ್ಮಣ ಗ್ರಾಮದ ಸದಸ್ಯರ ಮನೆಯ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಮತ್ತು – ಪದವಿಯಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದ್ರಿ ವಿದ್ಯಾರ್ಥಿಗಳನ್ನು ಸೆ. 15 ರಂದು ನಡೆಯುವ ಮಹಾಸಭೆಯಲ್ಲಿ ಗೌರವ ಧನದೊಂದಿಗೆ ಪುರಸ್ಕರಿಸಲಾಗುವುದು. ಆದುದರಿಂದ ಸೆ. 6 ರೊಳಗೆ ಆರ್ಹ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್, ಭಾವಚಿತ್ರ ಮತ್ತು ಅಂಕ ಪಟ್ಟಿ ಪ್ರತಿಗಳನ್ನು ಸಂಘದ ಪ್ರಧಾನ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು ಹಾಗೂ ನಿರ್ದೇಶಕರುಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪಿ ರವರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.