ಮೈಸೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಗರ್ಭಿಣಿ ಆತ್ಮಹತ್ಯೆ.
ಮೈಸೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಗರ್ಭಿಣಿ ಆತ್ಮಹತ್ಯೆ.
ಮೈಸೂರು: ವರದಕ್ಷಿಣೆ ಕಿರುಕುಳದಿಂದ ಮನನೊಂದು ಎಂಟು ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕನಕಗಿರಿ ಎಂಬಲ್ಲಿ ನಡೆದಿದೆ. 23 ವರ್ಷದ ಚೈತ್ರಾ ಆತ್ಮಹತ್ಯೆಗೆ ಶರಣಾದ ಗರ್ಭಿಣಿ. ಶರತ್ ರಾಜು ಎಂಬಾತನ ಜೊತೆ ಎರಡು ವರ್ಷಗಳ ಹಿಂದೆ ಚೈತ್ರಾ ವಿವಾಹವಾಗಿದ್ದರು.
ಚೈತ್ರಾ ಅವರ ಪತಿ ಮತ್ತು ಅತ್ತೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ಚೈತ್ರಾ ಅವರ ಹೆತ್ತವರು ಪತಿಯ ಮನೆಯವರ ವಿರುದ್ಧ ವಿದ್ಯಾರಣ್ಯಂಪುರಂ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೋಲಿಸರು ಸ್ಥಳಕ್ಕೆ ಆಗಮಿಸಿ ಚೈತ್ರಾ ಪತಿ ಶರತ್ ರಾಜ್ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.