• 19 ಫೆಬ್ರವರಿ 2025

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ.

 ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ.
Digiqole Ad

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ.

ಕಾಣಿಯೂರು :ಹಿಂದೂ ಧರ್ಮದ ಪ್ರತಿಯೊಂದು ಹಬ್ಬದ ಆಚರಣೆಯಲ್ಲಿ ಹಲವಾರು ಅಚಾರ ವಿಚಾರಗಳು ಇದ್ದು ಅವುಗಳಿಗೆ ತನ್ನದೇ ಆದ ಮಹತ್ವವಿದ್ದು ಇವುಗಳನ್ನು ನಾವು ಆಚರಣೆ ಮಾಡಬೇಕು ಜತೆಗೆ ನಮ್ಮ ಮಕ್ಕಳು ಆಚರಣೆ ಮಾಡುವಂತೆ ಮಾಡಬೇಕು ಮತ್ತು ರಾಮಾಯಣ ಮಹಾಭಾರತದ ಅದರ್ಶ ತತ್ವಗಳನ್ನು ತಿಳಿಸಿ ನಮ್ಮ ಧರ್ಮದ ಜ್ಞಾನ ಅವರಲ್ಲಿ ಮೂಡುವಂತೆ ಮಾಡಿ ಅವರು ಧರ್ಮದ ಮತ್ತು ರಾಷ್ಟ್ರದ ಸೇವೆ ಮಾಡುವಂತೆ ಮಾಡಬೇಕು ಎಂದು ಶ್ರೀ ಸತ್ಯನಾರಯಣ ಕಾರಂತ ಆಲಂಕಾರು ಹೇಳಿದರು.ಅವರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಕಾಣಿಯೂರು ಮತ್ತು ಸುವರ್ಣ ಮಹೋತ್ಸವ ಸಮಿತಿ 2024 ಇದರ ಆಶ್ರಯದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದಲ್ಲಿ ನಡೆದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ವಹಿಸಿದ್ದರು.ಕಾಣಿಯೂರು ವೈಷ್ಣವ ಟ್ರೇಡರ್ಸ್ ಮಾಲಕರಾದ ಧರ್ಣಪ್ಪ ಗೌಡ ಅಂಬುಲ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ, ಭಜನಾ ಮಂಡಳಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಕೋಶಾಧಿಕಾರಿ ಕೀರ್ತಿ ಕುಮಾರ್ ಎಳುವೆ ಉಪಸ್ಥಿತರಿದ್ದರು. ಭಜನಾ ಮಂಡಳಿಯ ಕಾರ್ಯದರ್ಶಿ ಜಯಂತ ಅಬೀರ ವಾರ್ಷಿಕ ವರದಿ ಮಂಡಿಸಿದರು. ಕಾನೂನು ಸಲಹೆಗಾರ ರಾಧಾಕೃಷ್ಣ ಸಾರಿತ್ತಡಿ ಗಣೇಶೋತ್ಸವದ ಪ್ರಯುಕ್ತ ನಡೆದ ಸ್ಪರ್ಧೆಗಳ ವಿಜೇತರಾದ ಹೆಸರನ್ನು ಓದಿದರು. ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಪದ್ಮಯ್ಯ ಗೌಡ ಅನಿಲ ಸ್ವಾಗತಿಸಿದರು. ಉಪಾಧ್ಯಕ್ಷರಾದ ರಾಧಾಕೃಷ್ಣ ಪೆರ್ಲೋಡಿ ವಂದಿಸಿದರು. ಪರಮೇಶ್ವರ ಅನಿಲ ಕಾರ್ಯಕ್ರಮ ನಿರೂಪಿಸಿದರು.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ