ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಅಡಿಕೆ ಎಲೆ ಚುಕ್ಕಿ ರೋಗ, ಹಸಿರು ಹುಲ್ಲಿನ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ
ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಅಡಿಕೆ ಎಲೆ ಚುಕ್ಕಿ ರೋಗ, ಹಸಿರು ಹುಲ್ಲಿನ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ
ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಸಿ ಪಿ ಸಿ ಆರ್ ಐ ವಿಟ್ಲ ಮತ್ತು ಕೆ ಎಂ ಎಫ್ ಸಹಭಾಗಿತ್ವದಲ್ಲಿ ಅಡಿಕೆ ಎಲೆ ಚುಕ್ಕಿ ರೋಗದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಹಸಿರು ಹುಲ್ಲಿನ ನಿರ್ವಹಣೆಯ ಬಗ್ಗೆ ಮಾಹಿತಿ ಶಿಬಿರ ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಕಲ್ಲುರಾಯ ಉದ್ಘಾಟಿಸಿದರು. ಅಡಿಕೆ ಎಲೆ ಚುಕ್ಕಿ ರೋಗದ ಬಗ್ಗೆ ಮಾಹಿತಿ ನೀಡಿದ ಹಿರಿಯ ವಿಜ್ಞಾನಿ ಸಿ ಪಿ ಸಿ ಆರ್ ಐ ವಿಟ್ಲದ ಡಾ. ನಾಗರಾಜ ಮಾಹಿತಿ ನೀಡಿ ಎಲ್ಲಾ ರೋಗಕ್ಕೂ ಮೂಲ ಕಾರಣ ಪೋಷಕಾಂಶಗಳ ಕೊರತೆ ಸರಿಯಾಗಿ ಮಣ್ಣು ಪರೀಕ್ಷೆ ಮಾಡಿ ಗಿಡಗಳಿಗೆ ಪೋಷಕಾಂಶ ನೀಡಬೇಕೆಂದರು. ಅಡಿಕೆ ತೋಟಕ್ಕೆ ಬಾಧಿಸುವ ಎಲ್ಲಾ ರೋಗಕ್ಕೂ ಮದ್ದುಗಳನ್ನು ನಮ್ಮ ವಿಜ್ಞಾನಿಗಳು ಕಂಡು ಹಿಡಿಯುತ್ತಾರೆ ಎಂದು ಭರವಸೆ ನೀಡಿದರು .ಆದ್ದರಿಂದ ರೈತರು ಆತಂಕ ಪಡದೆ ರೋಗ ನಿರೋಧಕ ತಳಿಗಳನ್ನು ನಾಟಿ ಮಾಡಿ ಅಲ್ಲದೆ ಎಲೆ ಚುಕ್ಕಿ ರೋಗಕ್ಕೆ ಕೇಂದ್ರ ಸರಕಾರ ಶಿಫಾರಸ್ಸು ಮಾಡಿದ ಮದ್ದುಗಳ ಬಗ್ಗೆ ಮಾಹಿತಿ ನೀಡಿದರು. ಹಸಿರು ಹುಲ್ಲಿನ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದ ಶ್ರೀಮತಿ ಶ್ರುತಿ, ಉಪ ವ್ಯವಸ್ಥಾಪಕರು ( ಪಶು ಆಹಾರ ಮತ್ತು ಮೇವು ) ಮಂಗಳೂರು ಖಾಲಿ ಜಾಗ ಮತ್ತು ಅಡಿಕೆ ತೋಟಗಳ ಮಧ್ಯೆ ಬೇರೆ ಬೇರೆ ತಳಿಯ ಹುಲ್ಲಿನ ಇಳುವರಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು ಅಲ್ಲದೆ ಕೆಎಂಎಫ್ ಒಕ್ಕೂಟದಿಂದ ಸಿಗುವ ಸೌಲಭ್ಯಗಳ ಬಗ್ಗೆ ರೈತರಿಗೆ ಮಾಹಿತಿ ಹಂಚಿದರು. ಈ ಕಾರ್ಯಕ್ರಮದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಶ್ವನಾಥ ಕೊಪ್ಪ, ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಗಣೇಶ್ ಉದನಡ್ಕ ,ಪಿ ಎಲ್ ಡಿ ಬ್ಯಾಂಕ್ ನ ನಿರ್ದೇಶಕರಾದ ದೇವಯ್ಯ ಕಂಡಿಗ, ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ ಕುಸುಮಾದರ ಇಡ್ಯಡ್ಕ, ನಿಕಟ ಪೂರ್ವ ಅಧ್ಯಕ್ಷರಾದ ಧನಂಜಯ ಕೇನಾಜೆ, ನಿಕಟಪೂರ್ವ ಉಪಾಧ್ಯಕ್ಷರಾದ ಬಾಲಕೃಷ್ಣ ಇಡ್ಯಡ್ಕ, ಕಾರ್ಯದರ್ಶಿ ದಮಯಂತಿ ಮುದುವ, ನಿರ್ದೇಶಕರು, ಸದಸ್ಯರು, ಮತ್ತು ಊರಿನ ನಾಗರಿಕರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರಾದ ಸತೀಶ್ ಕಲ್ಲುರಾಯ ಸ್ವಾಗತಿಸಿದ್ದರು. ನಿರ್ದೇಶಕರಾದ ವಸಂತ ದಲಾರಿಯವರು ಧನ್ಯವಾದ ದೊಂದಿಗೆ ಕಾರ್ಯಕ್ರಮವನ್ನು ನಿರೂಪಿಸಿದರು.