ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ…! ಆಸ್ಪತ್ರೆಗೆ ದಾಖಲು
ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ…! ಆಸ್ಪತ್ರೆಗೆ ದಾಖಲು
ಸುಳ್ಯ: ಕಾಡಾನೆ ದಾಳಿಗೆ ಅಯ್ಯಪ್ಪ ವ್ರತಧಾರಿಯೋರ್ವರು ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದಲ್ಲಿ ಇಂದು (ಡಿ.17) ಬೆಳಗ್ಗೆ ಸಂಭವಿಸಿದೆ.
ಅಯ್ಯಪ್ಪ ವೃತಧಾರಿ ಚರಿತ್ ಎಂಬವರು ಗಾಯಗೊಂಡವರು. ತೀವ್ರ ಗಾಯಗೊಂಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಬೆಳಗ್ಗಿನ ವೇಳೆ ತೋಡಿನಲ್ಲಿ ಬಟ್ಟೆ ತೊಳೆಯುತಿದ್ದಾಗ ಘಟನೆ ನಡೆದಿದ್ದು, ಬೆನ್ನು ಮತ್ತು ತಲೆಯ ಭಾಗಕ್ಕೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.