• 15 ಫೆಬ್ರವರಿ 2025

ಮಕರ ಸಂಕ್ರಾಂತಿಯ ವಿಶೇಷತೆ, ಮಹತ್ವ

 ಮಕರ ಸಂಕ್ರಾಂತಿಯ ವಿಶೇಷತೆ, ಮಹತ್ವ
Digiqole Ad

ಮಕರ ಸಂಕ್ರಾಂತಿಯ ವಿಶೇಷತೆ, ಮಹತ್ವ 

ಮಕರ ಸಂಕ್ರಾಂತಿಯು ಸುಗ್ಗಿಯ ಹಬ್ಬವಾಗಿದ್ದು, ಇದನ್ನು ದೇಶಾದ್ಯಂತ ವಿವಿಧ ಹೆಸರುಗಳೊಂದಿಗೆ ಆಚರಿಸಲಾಗುತ್ತದೆ. ಪ್ರತಿಯೊಂದು ರಾಜ್ಯವು ತಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದಂತೆ ಹಬ್ಬವನ್ನು ಆಚರಿಸುತ್ತಾರೆ. ಸುಗ್ಗಿಯ ಕಾಲವನ್ನು ಭಾರತದಲ್ಲಿ ಸಂಕ್ರಾಂತಿ, ಲೋಹ್ರಿ, ಪೊಂಗಲ್ ಮತ್ತು ಬಿಹು ಮುಂತಾದ ವಿವಿಧ ಹೆಸರುಗಳಿಂದ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿಯೂ ಸಂಕ್ರಾಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಭಾರತದ ಬಹುಪಾಲು ರಾಜ್ಯಗಳು ಸಂಕ್ರಾಂತಿಯನ್ನು ಆಚರಿಸುತ್ತವೆ. ಈ ವರ್ಷ ಜನವರಿ 15 ರಂದು ಸೋಮವಾರ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುವುದು.

ಮಕರ ಸಂಕ್ರಾಂತಿಯು ಸೂರ್ಯನೊಂದಿಗೆ ಸಂಬಂಧವನ್ನು ಹೊಂದಿದ ಹಬ್ಬವಾಗಿದೆ. ಈ ಹಬ್ಬವನ್ನು ಸೌರ ಚಕ್ರಗಳ ಆಧಾರದ ಮೇಲೆ ಆಚರಿಸಲಾಗುತ್ತದೆ. ಸೂರ್ಯನು 6 ತಿಂಗಳ ಕಾಲ ಉತ್ತರದ ಕಡೆಗೆ ಚಲಿಸುವ ಸಮಯ ಇದು. ಇದನ್ನೇ ಸೂರ್ಯನ ಉತ್ತರಾಯಣ ಸಂಚಾರ ಎಂದು ಕರೆಯಲಾಗುತ್ತದೆ.

ಮಕರ ಸಂಕ್ರಾಂತಿ ಇತಿಹಾಸ:

ಸಂಕ್ರಾಂತಿಯನ್ನು ದೇವತೆ ಎಂದು ಪರಿಗಣಿಸಲಾಗುತ್ತದೆ. ದಂತಕಥೆಯ ಪ್ರಕಾರ, ಸಂಕ್ರಾಂತಿಯು ಶಂಕರಾಸುರ ಎಂಬ ರಾಕ್ಷಸನನ್ನು ಕೊಂದಿತು. ಮಕರ ಸಂಕ್ರಾಂತಿಯ ಮುಂದಿನ ದಿನವನ್ನು ಕರಿದಿನ ಅಥವಾ ಕಿಂಕ್ರಾಂತ ಎಂದು ಕರೆಯಲಾಗುತ್ತದೆ. ಸಂಕ್ರಾಂತಿ ದೇವತೆಯನ್ನು ಹೊರತುಪಡಿಸಿ, ಮಕರ ಸಂಕ್ರಾಂತಿಯನ್ನು ಭಾರತದ ಎರಡು ಮಹಾಕಾವ್ಯ ಗ್ರಂಥಗಳಾದ ಪುರಾಣಗಳು ಮತ್ತು ಮಹಾಭಾರತದಲ್ಲಿ ಉಲ್ಲೇಖಿಸಲಾಗಿದೆ. ಕೆಲವು ನಂಬಿಕೆಗಳ ಪ್ರಕಾರ, ವೈದಿಕ ಋಷಿ ವಿಶ್ವಾಮಿತ್ರನು ಈ ಹಬ್ಬವನ್ನು ಆಚರಿಸಲು ಪ್ರಾರಂಭಿಸಿದನು ಮತ್ತು ಮಹಾಭಾರತದಲ್ಲಿ ಪಾಂಡವರು ತಮ್ಮ ವನವಾಸದ ಸಮಯದಲ್ಲಿ ಈ ಹಬ್ಬವನ್ನು ಆಚರಿಸಿದರು ಎನ್ನುವ ನಂಬಿಕೆಯಿದೆ.

 ಮಕರ ಸಂಕ್ರಾಂತಿ ಮಹತ್ವ:

ಮಕರ ಸಂಕ್ರಾಂತಿಯು ಸೂರ್ಯ ದೇವನಿಗೆ ಮೀಸಲಾಗಿದೆ. ಈ ಹಬ್ಬವು ಹಿಂದೂಗಳಿಗೆ ಉತ್ತರಾಯಣ ಕಾಲ ಎಂದು ಕರೆಯಲ್ಪಡುವ ಆರು ತಿಂಗಳ ಮಂಗಳಕರ ಅವಧಿಯ ಆರಂಭವನ್ನು ಸಂಕೇತಿಸುತ್ತದೆ. ಇದು ಆಧ್ಯಾತ್ಮಿಕ ಆಚರಣೆಗಳಿಗೆ ಮಹತ್ವದ ಅವಧಿ ಎಂದು ಪರಿಗಣಿಸಲಾಗಿದೆ. ಮಕರ ಸಂಕ್ರಾಂತಿಯ ಸಂದರ್ಭದಲ್ಲಿ, ಗಂಗಾ ಮತ್ತು ಜಮುನಾ ಸಂಗಮದಲ್ಲಿ ಲಕ್ಷಾಂತರ ಜನರು ಪವಿತ್ರ ಸ್ನಾನ ಮಾಡುತ್ತಾರೆ. ಈ ಪವಿತ್ರ ಸ್ನಾನವು ಜನ್ಮ ಜನ್ಮಗಳ ಪಾಪಗಳನ್ನು ಕಳೆಯುತ್ತದೆ ಎನ್ನುವ ನಂಬಿಕೆಯಿದೆ. ಜನರು ತಮ್ಮ ಪ್ರಾರ್ಥನೆಗಳನ್ನು ಸೂರ್ಯ ದೇವರಿಗೆ ಸಲ್ಲಿಸುತ್ತಾರೆ.

 

Digiqole Ad

ಈ ಸುದ್ದಿಗಳನ್ನೂ ಓದಿ