ಚಾರ್ವಾಕ ಯಕ್ಷಗಾನ ಹಾಸ್ಯ ಕಲಾವಿದ ಯಕ್ಷ ಬೊಳ್ಳಿ ಕಡಬ ದಿನೇಶ್ ರವರಿಗೆ ಸನ್ಮಾನ ಕಾರ್ಯಕ್ರಮ
ಚಾರ್ವಾಕ ಯಕ್ಷಗಾನ ಹಾಸ್ಯ ಕಲಾವಿದ ಯಕ್ಷ ಬೊಳ್ಳಿ ಕಡಬ ದಿನೇಶ್ ರವರಿಗೆ ಸನ್ಮಾನ ಕಾರ್ಯಕ್ರಮ
ಶ್ರೀ ಕಪಿಲೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ಗೆಜ್ಜೆ ಗಿರಿ ಮೇಳದವರ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಯಕ್ಷ ಬೊಳ್ಳಿ ಯಕ್ಷಗಾನ ಹಾಸ್ಯ ಕಲಾವಿದ ಕಡಬ ದಿನೇಶ್ ರೈಯವರನ್ನು ಸನ್ಮಾನಿಸಲಾಯಿತು.ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೊರಗಪ್ಪ ಗೌಡ ಕುಕ್ಕುನಡ್ಕ, ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಧರ್ಮಪಾಲ್ ಕೆ ರವರು ದಿನೇಶ್ ರೈಯವರನ್ನು ಸನ್ಮಾನಿಸಿದರು.ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಿನೇಶ್ ಗೌಡ ಇಡ್ಯಡ್ಕ ಉಪಸ್ಥಿತರಿದ್ದರು.ಯಕ್ಷಗಾನ ಸಂಯೋಜಕರಾದ ಯಕ್ಷಗಾನ ಕಲಾವಿದ ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಅಭಿನಂದನಾ ನುಡಿಗಳನ್ನಾಡಿದರು.ಜಿಲ್ಲಾ ಪ್ರಶಸ್ತಿ ಪುರಸ್ಕೃತ ಜಯಂತ್ ವೈ ಸನ್ಮಾನ ಪತ್ರ ವಾಚಿಸಿದರು.ಶಿಕ್ಷಕ ಶಿವಪ್ರಸಾದ್ ಬಾರೆಂಗಳ ನಿರೂಪಿಸಿದರು.