• 8 ಫೆಬ್ರವರಿ 2025

ಕಲಾವಿದ, ಸಂಘಟಕ ಡಾ. ಚಂದ್ರು ಚಿತ್ರದುರ್ಗ ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಆಯ್ಕೆ.

 ಕಲಾವಿದ, ಸಂಘಟಕ ಡಾ. ಚಂದ್ರು ಚಿತ್ರದುರ್ಗ ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಆಯ್ಕೆ.
Digiqole Ad

ಕಲಾವಿದ, ಸಂಘಟಕ ಡಾ. ಚಂದ್ರು ಚಿತ್ರದುರ್ಗ ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಆಯ್ಕೆ

ಕಾಸರಗೋಡು : ಸಂಘಟಕ, ಕಲಾವಿದ, ಹತ್ತಾರು ಸಂಘಟನೆಗಳ ಪದಾಧಿಕಾರಿಯಾಗಿ ಜನಪ್ರಿಯ ಕನ್ನಡ ಸಂಘಟಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಡಾ. ಚಂದ್ರು ಚಿತ್ರದುರ್ಗ ಇವರು ಕೇರಳ ರಾಜ್ಯ, ಕಾಸರಗೋಡು ಕನ್ನಡ ಭವನದ, ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕನ್ನಡ ಭವನದ “ರಜತ ಸಂಭ್ರಮ “ವರ್ಷವಾದ 2025 ರಲ್ಲಿ ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕವನ್ನು ಸ್ಥಾಪಿಸಲಾಗುತ್ತಿದೆ. ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರು ನಾಮ ನಿರ್ದೇಶನ ಮಾಡಿದರು. ಇನ್ನೊರ್ವ ರಾಜ್ಯ ಸಂಚಾಲಕರಾದ ಬಿ. ಶಿವಕುಮಾರ್ ಕೋಲಾರ ಅನುಮೋದಿಸಿದರು. ಸರ್ವಾನುಮತದಿಂದ ಆಯ್ಕೆಯಾದ ಡಾ. ಚಂದ್ರು ಚಿತ್ರದುರ್ಗ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಚುಟುಕು ಸಾಹಿತ್ಯ ಪರಿಷತ್, ಕೇಂದ್ರ ಸಮಿತಿ, (ಕನ್ನಡ ಭವನ ) ಹಾಗೂ ಕರ್ನಾಟಕ ರಾಜ್ಯದಿಂದ ಕಾಸರಗೋಡು ಪ್ರದೇಶಕ್ಕೆ ಆಗಮಿಸುವ ಸಾಹಿತ್ಯ, ಸಾಂಸ್ಕೃತಿಕ ರಾಯಬಾರಿಗಳಿಗೆ “ಉಚಿತ ವಸತಿ ಸೌಕರ್ಯ “ರಜತ ಸಂಭ್ರಮ ವಿಶೇಷ ಕಾರ್ಯಕ್ರಮಗಳ ಆಯೋಜನೆಯಲ್ಲಿ ಚಿತ್ರದುರ್ಗ ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯಪ್ರವಿತ್ತರಾಗಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಚಾಲಕಿಯಾಗಿರುವ ಸಂದ್ಯಾ ರಾಣಿ ಟೀಚರ್ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Digiqole Ad

ಈ ಸುದ್ದಿಗಳನ್ನೂ ಓದಿ