ಕರ್ನಾಟಕದೆಲ್ಲೆಡೆ ಶೀತ ಗಾಳಿ: ಮುಂದಿನ ಒಂದೆರಡು ದಿನಗಳ ಬಳಿಕ ಮಳೆಯಾಗುವ ಸಾಧ್ಯತೆ:ಹವಾಮಾನ ಇಲಾಖೆ
ಕರ್ನಾಟಕದೆಲ್ಲೆಡೆ ಶೀತ ಗಾಳಿ: ಮುಂದಿನ ಒಂದೆರಡು ದಿನಗಳ ಬಳಿಕ ಮಳೆಯಾಗುವ ಸಾಧ್ಯತೆ:ಹವಾಮಾನ ಇಲಾಖೆ
ಬೆಂಗಳೂರು: ಕರ್ನಾಟಕದೆಲ್ಲೆಡೆ ಶೀತ ಗಾಳಿ ಮುಂದುವರಿದಿದೆ, ಮುಂದಿನ ಒಂದೆರಡು ದಿನಗಳ ಬಳಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಬೀದರ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ,ಕೋಲಾರ, ಮಂಡ್ಯ,ದಾವಣಗೆರೆ, ಶಿವಮೊಗ್ಗ, ರಾಮನಗರ, ವಿಜಯನಗರದಲ್ಲಿ ಚಳಿಗಾಳಿ, ಒಣಹವೆ ಮುಂದುವರಿಯಲಿದೆ.
ಚಾಮರಾಜನಗರ,ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ,ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.