ವಿಜಯನಗರ: ಆಕಸ್ಮಿಕ ಬೆಂಕಿ, 40ಕ್ಕೂ ಹೆಚ್ಚು ಕುರಿಗಳು ಸಜೀವ ದಹನ
ವಿಜಯನಗರ: ಆಕಸ್ಮಿಕ ಬೆಂಕಿ, 40ಕ್ಕೂ ಹೆಚ್ಚು ಕುರಿಗಳು ಸಜೀವ ದಹನ
ವಿಜಯನಗರ : ಕುರಿ ಶೆಡ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 40ಕ್ಕೂ ಹೆಚ್ಚು ಕುರಿಗಳು ಬೆಂಕಿಗೆ ಆಹುತಿಯಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಅಮಲಾಪುರ ಗ್ರಾಮದಲ್ಲಿ ಸಂಭವಿಸಿದೆ.
ಅಗಸರ ಶೇಖರಪ್ಪ ಎಂಬ ರೈತನಿಗೆ ಸೇರಿದ ಕುರಿಗಳಾಗಿದ್ದು, ಘಟನೆ ವೇಳೆ ಯಾರು ಇಲ್ಲದೇ ಇದ್ದ ಕಾರಣ ಎಲ್ಲಾ ಕುರಿಗಳು ಸಾವನ್ನಪ್ಪಿವೆ. 4 ಲಕ್ಷ ರೂಪಾಯಿಗಿಂತಲೂ ಹೆಚ್ಚು ಬೆಲೆಬಾಳುವ ಕುರಿಗಳನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ.