ಮಹಾಕುಂಭ ಮೇಳದಲ್ಲಿ ಪಾಲ್ಗೊಂಡ ಪ್ರಧಾನಿ
ಮಹಾಕುಂಭ ಮೇಳದಲ್ಲಿ ಪಾಲ್ಗೊಂಡ ಪ್ರಧಾನಿ
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮಿಂದೆದ್ದಿದ್ದಾರೆ. ಈ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೋದಿಯವರೊಂದಿಗೆ ಹಾಜರಿದ್ದರು.
ಜನವರಿ 13ರಂದು ಪ್ರಾರಂಭವಾದ ಮಹಾಕುಂಭದಲ್ಲಿ ಇಲ್ಲಿಯವರೆಗೆ 14 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಇವರಲ್ಲಿ ಕೇಂದ್ರ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಕೇಂದ್ರ ಸಚಿವ ಕಿರಣ್ ರಿಜಿಜು, ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಸೇರಿ ಹಲವು ಗಣ್ಯರು ಪವಿತ್ರ ಸ್ನಾನ ಮಾಡಿದ್ದಾರೆ.