ಮಹಾಕುಂಭ ಮೇಳ-ಇದುವರೆಗೆ 60 ಕೋಟಿ ಭಕ್ತರಿಂದ ಪವಿತ್ರ ಸ್ನಾನ: ಉ.ಪ್ರ ಸರಕಾರ
ಮಹಾಕುಂಭ ಮೇಳ-ಇದುವರೆಗೆ 60 ಕೋಟಿ ಭಕ್ತರಿಂದ ಪವಿತ್ರ ಸ್ನಾನ: ಉ.ಪ್ರ ಸರಕಾರ
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರಕಾರ ತಿಳಿಸಿದೆ.
ಜನವರಿ 13 ರಂದು ಆರಂಭವಾದ ಮಹಾಕುಂಭ ಮೇಳ ಫೆಬ್ರವರಿ 26,ಮಹಾ ಶಿವರಾತ್ರಿಯಂದು ಕೊನೆಯಾಗಲಿದೆ.
ಭಾರತದ 110 ಕೋಟಿ ಸನಾತನ ಅನುಯಾಯಿಗಳಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಮತ್ತು ಫೆ.26 ರಂದು ನಡೆಯುವ ಅಂತಿಮ ಅಮೃತ ಸ್ನಾನದ ವೇಳೆಗೆ ಈ ಸಂಖ್ಯೆ 65 ಕೋಟಿಯನ್ನು ಮೀರುವ ನಿರೀಕ್ಷೆ ಇದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.