• 8 ಸೆಪ್ಟೆಂಬರ್ 2024

ಸಿದ್ದು ಸಿಎಂ ಅಧಿಕೃತ ಘೋಷಣೆ..

 ಸಿದ್ದು ಸಿಎಂ ಅಧಿಕೃತ ಘೋಷಣೆ..
Digiqole Ad

ಸಿದ್ದರಾಮಯ್ಯನವರು ಸಿ.ಎಂ ಆಗಿ ಘೋಷಣೆ ಆದ ಮೊದಲ ಬಾರಿಗೆ ಟ್ವಿಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.’ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ’ ಎಂದು ಹೇಳಿದ್ದಾರೆ. ಈ ನಡುವೆ ಅವರು ಮಾಧ್ಯಮಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ..

 

ನಾವು ಎಂದಿಗೂ ಒಗ್ಗಟ್ಟಾಗಿದ್ದೇವೆ:- ಡಿಕೆಶಿ

 

ರಾಜ್ಯದ ನೂತನ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟ್ವಿಟ್ ಮಾಡಿದ್ದಾರೆ. ನಾವು ಎಂದಿಗೂ ಒಗ್ಗಟ್ಟಾಗಿದ್ದೇವೆ. ಕರ್ನಾಟಕದ ಸುಭದ್ರ ಭವಿಷ್ಯ ಮತ್ತು ಜನಪರ ಆಡಳಿತ ನಮ್ಮ ಪ್ರಮುಖ ಆದ್ಯತೆಯಾಗಿದೆ. ಅದನ್ನು ಖಾತರಿಪಡಿಸುವಲ್ಲಿ ನಾವು ಒಗ್ಗಟ್ಟಾಗಿದ್ದೇವೆ ಎಂದು ತಿಳಿಸಿದ್ದಾರೆ. ಹೈಕಮಾಂಡ್ ಸೂತ್ರಕ್ಕೆ ಒಪ್ಪಿರುವ ಡಿಕೆಶಿ, ಅವರು ಡಿಸಿಎಂ ಸ್ಥಾನದ ಜೊತೆ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಎಂದು ಅಧಿಕೃತ ಮೂಲಗಳು ತಿಳಿಸಿವೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ