ಭಾರತೀಯ ಸೇನೆಯಲ್ಲಿ ಪಾಕಿಸ್ತಾನಿಗಳಿಗೆ ಉದ್ಯೋಗ? ಅರ್ಜಿಯಲ್ಲಿ ಶಾಕಿಂಗ್ ವಿಚಾರ, ತನಿಖೆಗೆ ಆದೇಶಿಸಿದ ನ್ಯಾಯಾಲಯ
ಭಾರತೀಯ ಸೇನೆಯಲ್ಲಿ ಪಾಕಿಸ್ತಾನಿಗಳಿಗೆ ಉದ್ಯೋಗ? ಅರ್ಜಿಯಲ್ಲಿ ಶಾಕಿಂಗ್ ವಿಚಾರ, ತನಿಖೆಗೆ ಆದೇಶಿಸಿದ ನ್ಯಾಯಾಲಯ
ಪಾಕಿಸ್ತಾನಿ ಪ್ರಜೆಗಳಿಗೆ ಸಶಸ್ತ್ರ ಪಡೆಗಳಲ್ಲಿ ಉದ್ಯೋಗ ನೀಡಲಾಗಿದೆ ಎಂದು ಆರೋಪಿಸಿ ಕಲ್ಕತ್ತಾ ಹೈಕೋರ್ಟ್ನ ನ್ಯಾಯಮೂರ್ತಿ ರಾಜಶೇಖರ್ ಮಂಥಾ ಅವರ ಏಕ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಆರೋಪದ ಬಳಿಕ ಹೈಕೋರ್ಟ್ ಸಿಐಡಿ ತನಿಖೆಗೆ ಆದೇಶಿಸಿದೆ.
ಪಾಕಿಸ್ತಾನಿ ಪ್ರಜೆಗಳು ಭಾರತೀಯ ಸೇನೆಯಲ್ಲಿ ಉದ್ಯೋಗ ಪಡೆಯುತ್ತಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಈ ವಿಷಯ ಕಲ್ಕತ್ತಾ ಹೈಕೋರ್ಟಿನಲ್ಲಿ ನಡೆದ ಅರ್ಜಿ ವಿಚಾರಣೆ ವೇಖೆ ಬಯಲಾಗಿದೆ. ನಕಲಿ ದಾಖಲೆಗಳ ಮೂಲಕ ಇಬ್ಬರು ಪಾಕಿಸ್ತಾನಿ ಪ್ರಜೆಗಳಿಗೆ ಸಶಸ್ತ್ರ ಪಡೆಗಳಲ್ಲಿ ಉದ್ಯೋಗ ನೀಡಲಾಗಿದೆ ಎಂದು ಆರೋಪಿಸಿ ಕಲ್ಕತ್ತಾ ಹೈಕೋರ್ಟ್ನ ನ್ಯಾಯಮೂರ್ತಿ ರಾಜಶೇಖರ್ ಮಂಥಾ ಅವರ ಏಕ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಆರೋಪದ ಬಳಿಕ ಹೈಕೋರ್ಟ್ ಸಿಐಡಿ ತನಿಖೆಗೆ ಆದೇಶಿಸಿದೆ.
ಅರ್ಜಿಯಲ್ಲಿ ಹೆಸರಿಸಲಾದ ಇಬ್ಬರು ಪಾಕಿಸ್ತಾನಿ ಪ್ರಜೆಗಳಾದ ಜೈಕಾಂತ್ ಕುಮಾರ್ ಮತ್ತು ಪ್ರದ್ಯುಮಾನ್ ಕುಮಾರ್ ಪ್ರಸ್ತುತ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬ್ಯಾರಕ್ಪೋರ್ನಲ್ಲಿರುವ ಡಿಫೆನ್ಸ್ ಕಂಟೋನ್ಮೆಂಟ್ನಲ್ಲಿ ನಿಯೋಜಿಸಲ್ಪಟ್ಟಿದ್ದಾರೆ. ಅರ್ಜಿದಾರರು ಹೂಗ್ಲಿ ಜಿಲ್ಲೆಯ ನಿವಾಸಿಯಾದ ಬಿಷ್ಣು ಚೌಧರಿ. ಮೊಕದ್ದಮೆಯಲ್ಲಿ ಸೇನೆಯ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ, ಪೌರತ್ವವನ್ನು ಪರಿಶೀಲಿಸದೆ ಸೇನೆಗೆ ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಪರೀಕ್ಷೆಯ ಮೂಲಕ ಪಾಕಿಸ್ತಾನಿಯರ ನೇಮಕಾತಿ
ಕಲ್ಕತ್ತಾ ಹೈಕೋರ್ಟ್ನ ನ್ಯಾಯಮೂರ್ತಿ ರಾಜಶೇಖರ್ ಮಂಥ ಅವರು ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಈ ವಿಚಾರದಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಭಾಗಿಯಾಗಿರುವ ಸಾಧ್ಯತೆಯನ್ನು ನ್ಯಾಯಾಲಯ ವ್ಯಕ್ತಪಡಿಸಿದೆ. ಇಬ್ಬರು ಪಾಕಿಸ್ತಾನಿ ಪ್ರಜೆಗಳು ಬ್ಯಾರಕ್ಪೋರ್ ಸೇನಾ ಶಿಬಿರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಅವರು ಪಾಕಿಸ್ತಾನದಿಂದ ಬಂದ ನಂತರ ಭಾರತೀಯ ಸೇನೆಗೆ ಸೇರಿದ್ದರು ಎಂದು ವರದಿಯಾಗಿದೆ. ಅವರ ನೇಮಕಾತಿಯನ್ನು ಸರ್ಕಾರಿ ಪರೀಕ್ಷೆಯ ಮೂಲಕವೂ ಮಾಡಲಾಗಿದೆ. ಪರೀಕ್ಷೆಯಲ್ಲಿ ಅಗತ್ಯ ದಾಖಲೆಗಳನ್ನು ನಕಲಿ ಮಾಡಿ ಇಬ್ಬರೂ ಕೆಲಸ ಗಿಟ್ಟಿಸಿಕೊಂಡಿದ್ದರು.
ಸೇನಾ ನೇಮಕಾತಿಯಲ್ಲಿ ಫೋರ್ಜರಿ ಇದೆಯೇ, ಇದು ಗಂಭೀರ ವಿಷಯ ಎಂದ ನ್ಯಾಯಾಲಯ
ಇಬ್ಬರೂ ಸಿಬ್ಬಂದಿ ಆಯ್ಕೆ ಆಯೋಗದ ಪರೀಕ್ಷೆಯ ಮೂಲಕ ಆಯ್ಕೆಯಾಗಿದ್ದಾರೆ ಮತ್ತು ನಕಲಿ ದಾಖಲೆಗಳ ಮೂಲಕ ಉದ್ಯೋಗ ಪಡೆದಿದ್ದಾರೆ ಎಂದು ಚೌಧರಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ. ನಕಲಿ ದಾಖಲೆಗಳ ಮೂಲಕ ಇಂತಹ ನೇಮಕಾತಿಗಳ ಹಿಂದೆ ಪ್ರಭಾವಿ ರಾಜಕೀಯ ಮುಖಂಡರು, ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಬೃಹತ್ ದಂಧೆಯು ಶಾಮೀಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ವಿಷಯ ಮಂಗಳವಾರ ನ್ಯಾಯಮೂರ್ತಿ ಮಂಥಾ ಅವರ ನೇತೃತ್ವದಲ್ಲಿ ವಿಚಾರಣೆಗೆ ಬಂದಾಗ, ಅವರಿಗೂ ಆಶ್ಚರ್ಯವಾಯಿತು. ಅರ್ಜಿದಾರರ ಆರೋಪದಲ್ಲಿ ಸತ್ಯಾಂಶವಿದ್ದರೆ ಅದು ಅತ್ಯಂತ ಗಂಭೀರ ವಿಚಾರವಾಗಿದೆ ಎಂದಿದ್ದಾರೆ.
14 ವರ್ಷದ ಬಾಲಕನನ್ನು ಕೊಂದ ಮೊಸಳೆಯನ್ನು ಕೊಂದ ಜನರು!